ಕ್ರೀಡೆ

IPL 2024: ಶಶಾಂಕ್‌ ಅಮೋಘ ಅರ್ಧಶತಕದಾಟ: ಜಿಟಿ ವಿರುದ್ಧ ಪಂಜಾಬ್‌ಗೆ ಭರ್ಜರಿ ಜಯ!

ಅಹಮದಾಬಾದ್‌: ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟದ ಫಲವಾಗಿ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಮೂರು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ 19.5 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 200 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಗುಜರಾತ್‌ ಇನ್ನಿಂಗ್ಸ್‌: ಪಂಜಾಬ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಗಿಲ್ (89*) ಆಕರ್ಷಕ ಅರ್ಧಶತಕ ಗಳಿಸಿದರು. ಅವರಿಗೆ ಕೇನ್ ವಿಲಿಯನ್ (26) ಹಾಗೂ ಸಾಯ್ ಸುದರ್ಶನ್ (33) ಸಹಕರಿಸಿದರು. ಉಳಿದಂತೆ ವೃದ್ಧಿಮಾನ್ ಸಹಾ 11 ಹಾಗೂ ವಿಜಯ್ ಶಂಕರ್ 8 ರನ್ ಗಳಿಸಿದರು. ಕೊನೆಯ ಹಂತದಲ್ಲಿ ರಾಹುಲ್ ತೆವಾಟಿಯಾ 8 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 23 ರನ್ ಗಳಿಸಿ ತಂಡದ ಅಂಕ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಕಗಿಸೋ ರಬಾಡ ಎರಡು ವಿಕೆಟ್ ಗಳಿಸಿದರು. ಹರ್ಪ್ರೀತ್‌ ಬ್ರಾರ್‌ ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದು ವಿಕೆಟ್‌ ಕಿತ್ತರು.

ಪಂಜಾಬ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಶಿಖರ್‌ ಧವನ್‌ ಕೇವಲ ಒಂದು ರನ್‌ ಗಳಿಸಿ ಬಂದ ಹಾದಿಯಲ್ಲೇ ಹಿಂತಿರುಗಿದರು. ಬಳಿಕ ಬೇರ್‌ಸ್ಟೋ ಜೊತೆಯಾದ ಪ್ರಭ್‌ಸಿಮ್ರಾನ್‌ ಕೆಲಕಾಲ ಜಿಟಿ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ಕ್ರಮವಾಗಿ 22 ಮತ್ತು 35 ರನ್‌ ಗಳಿಸಿ ಇಬ್ಬರು ನೂರ್‌ ಅಹ್ಮದ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಉಳಿದಂತೆ ಸ್ಯಾಮ್‌ ಕರನ್‌ 5, ಸಿಕಂದರ್‌ ರಾಜಾ 15, ಜಿತೇಶ್‌ ಶರ್ಮಾ 16 ರನ್‌ ಕೆಲಹಾಕಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಟವಾಡಿದ ಶಶಾಂಕ್‌ ಸಿಂಗ್‌ ದಿಟ್ಟ ಹೋರಾಟ ತೋರಿದರು. ಇವರಿಗೆ ಅಶುತೋಷ್‌ ಉತ್ತಮ ಜೊತೆಯಾಟ ನೀಡಿದರು. ಅಶುತೋಷ್ 17 ಎಸೆತ 3 ಬೌಂಡರಿ 1 ಸಿಕ್ಸರ್‌ ಸೇರಿ 31 ರನ್‌ ಬಾರಿಸಿ ನಲ್ಕಂಡೆಗೆ ವಿಕೆಟ್‌ ಒಪ್ಪಿಸಿದರು.

ಆದರೆ ಪಂದ್ಯದುದ್ದಕ್ಕೂ ಉತ್ತಮ ಆಟವಾಡಿದ ಶಶಾಂಕ್‌ ಸಿಂಗ್‌ ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದರು. ಕೇವಲ 29ಎಸೆತ ಎದುರಿಸಿ 6 ಬೌಂಡರಿ 4 ಸಿಕ್ಸರ್‌ ಸಹಿತ 61 ರನ್‌ ಗಳಿಸಿ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುಜರಾತ್‌ ಪರ ನೂರ್‌ ಅಹ್ಮದ್‌ 2, ಓಮರ್ಜಾಯಿ, ಉಮೇಶ್‌ ಯಾದವ್‌, ರಶೀದ್‌ ಖಾನ್‌, ಮೋಹಿತ್‌ ಶರ್ಮಾ ಮತ್ತು ನಲ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

17 mins ago

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

51 mins ago

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…

1 hour ago

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…

2 hours ago

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

3 hours ago