ಕ್ರೀಡೆ

ಭಾವನೆ ಬದಿಗಿಟ್ಟು, ವೃತ್ತಿಪರರಾಗಿ ಆಡಿ : ಆಟಗಾರರಿಗೆ ಗಂಭೀರ್‌ ಸಂದೇಶ

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ ಕೂಗು.

ಏಷ್ಯಾಕಪ್​ನ ವೇಳಾಪಟ್ಟಿ ಪ್ರಕಟವಾದಗಿನಿಂದಲೂ ಈ ಪಂದ್ಯದ ಬಗ್ಗೆ ಅಪಸ್ವರ ಕೇಳಿಬರುತ್ತಲೇ ಇದೆ. ಇದೀಗ ಪಂದ್ಯ ಹತ್ತಿರವಾದಂತೆ ರಾಜಕೀಯ ಪಕ್ಷಗಳಿಂದ ಹಿಡಿದು ಸಾರ್ವಜನಿಕರು ಕೂಡ ಈ ಪಂದ್ಯವನ್ನು ಟೀಂ ಇಂಡಿಯಾ ಆಡಬಾರದು ಎಂಬ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಭಾರತದಲ್ಲಿನ ಈ ವಾತಾವರಣ ಆಟಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ಆಟಗಾರರ ಮನೋಬಲವನ್ನು ಹೆಚ್ಚಿಸಲು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್​ ಆಟಗಾರರಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ದಿನ ಮೊದಲು ಪತ್ರಿಕಾಗೋಷ್ಠಿ ನಡೆದಿತು. ಈ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾದ ಯಾವ ಆಟಗಾರನೂ ಹಾಜರಿರಲಿಲ್ಲ. ಆಟಗಾರರ ಬದಲಿಗೆ ತಂಡದ ಪರವಾಗಿ ಸಹಾಯಕ ಕೋಚ್ ರಯಾನ್ ಟೆನ್​ಡೋಸ್ಚೇಟ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರು ಪಂದ್ಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಕೇಳಿಕೊಂಡಿದ್ದಾರೆ. ಭಾರತದಲ್ಲಿ ಈ ಪಂದ್ಯದ ಬಗ್ಗೆ ಯಾವ ರೀತಿಯ ಅಭಿಪ್ರಾಯ ಕೇಳಿಬರುತ್ತಿದೆ ಎಂಬುದು ನಮಗೆ ತಿಳಿದಿದೆ.

ಆದರೆ ನಾವು ಭಾವನೆಗಳನ್ನು ಬದಿಗಿಟ್ಟು, ವೃತ್ತಿಪರರಾಗಿರಬೇಕು. ಆಟದ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಕು. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯವನ್ನು ಹೊಂದಿರುತ್ತಾರೆ ಆದರೆ ತಂಡದ ಗಮನ ಕ್ರಿಕೆಟ್ ಮೇಲೆ ಮಾತ್ರ ಇರಬೇಕು. ಇದು ಸೂಕ್ಷ್ಮ ವಿಷಯ. ಏಷ್ಯಾಕಪ್ ಬಹಳ ದಿನಗಳಿಂದ ಚರ್ಚೆಯ ವಿಷಯವಾಗಿತ್ತು. ಒಂದು ಸಮಯದಲ್ಲಿ ನಾವು ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ನಮಗೆ ಆಡುವ ಅವಕಾಶ ಸಿಕ್ಕಿದೆ. ಹೀಗಾಗಿ ಆಟಗಾರರು ಭಾವನೆಗಳನ್ನು ಬದಿಗಿಟ್ಟು ತಮ್ಮ ಕೆಲಸವನ್ನು ಮಾಡಬೇಕು ಎಂಬ ವಿಶೇಷ ಸಂದೇಶ ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

2 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago