ಕ್ರೀಡೆ

ಭಾವನೆ ಬದಿಗಿಟ್ಟು, ವೃತ್ತಿಪರರಾಗಿ ಆಡಿ : ಆಟಗಾರರಿಗೆ ಗಂಭೀರ್‌ ಸಂದೇಶ

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ ಕೂಗು.

ಏಷ್ಯಾಕಪ್​ನ ವೇಳಾಪಟ್ಟಿ ಪ್ರಕಟವಾದಗಿನಿಂದಲೂ ಈ ಪಂದ್ಯದ ಬಗ್ಗೆ ಅಪಸ್ವರ ಕೇಳಿಬರುತ್ತಲೇ ಇದೆ. ಇದೀಗ ಪಂದ್ಯ ಹತ್ತಿರವಾದಂತೆ ರಾಜಕೀಯ ಪಕ್ಷಗಳಿಂದ ಹಿಡಿದು ಸಾರ್ವಜನಿಕರು ಕೂಡ ಈ ಪಂದ್ಯವನ್ನು ಟೀಂ ಇಂಡಿಯಾ ಆಡಬಾರದು ಎಂಬ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಭಾರತದಲ್ಲಿನ ಈ ವಾತಾವರಣ ಆಟಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ಆಟಗಾರರ ಮನೋಬಲವನ್ನು ಹೆಚ್ಚಿಸಲು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್​ ಆಟಗಾರರಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ದಿನ ಮೊದಲು ಪತ್ರಿಕಾಗೋಷ್ಠಿ ನಡೆದಿತು. ಈ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾದ ಯಾವ ಆಟಗಾರನೂ ಹಾಜರಿರಲಿಲ್ಲ. ಆಟಗಾರರ ಬದಲಿಗೆ ತಂಡದ ಪರವಾಗಿ ಸಹಾಯಕ ಕೋಚ್ ರಯಾನ್ ಟೆನ್​ಡೋಸ್ಚೇಟ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರು ಪಂದ್ಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಕೇಳಿಕೊಂಡಿದ್ದಾರೆ. ಭಾರತದಲ್ಲಿ ಈ ಪಂದ್ಯದ ಬಗ್ಗೆ ಯಾವ ರೀತಿಯ ಅಭಿಪ್ರಾಯ ಕೇಳಿಬರುತ್ತಿದೆ ಎಂಬುದು ನಮಗೆ ತಿಳಿದಿದೆ.

ಆದರೆ ನಾವು ಭಾವನೆಗಳನ್ನು ಬದಿಗಿಟ್ಟು, ವೃತ್ತಿಪರರಾಗಿರಬೇಕು. ಆಟದ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಕು. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯವನ್ನು ಹೊಂದಿರುತ್ತಾರೆ ಆದರೆ ತಂಡದ ಗಮನ ಕ್ರಿಕೆಟ್ ಮೇಲೆ ಮಾತ್ರ ಇರಬೇಕು. ಇದು ಸೂಕ್ಷ್ಮ ವಿಷಯ. ಏಷ್ಯಾಕಪ್ ಬಹಳ ದಿನಗಳಿಂದ ಚರ್ಚೆಯ ವಿಷಯವಾಗಿತ್ತು. ಒಂದು ಸಮಯದಲ್ಲಿ ನಾವು ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ನಮಗೆ ಆಡುವ ಅವಕಾಶ ಸಿಕ್ಕಿದೆ. ಹೀಗಾಗಿ ಆಟಗಾರರು ಭಾವನೆಗಳನ್ನು ಬದಿಗಿಟ್ಟು ತಮ್ಮ ಕೆಲಸವನ್ನು ಮಾಡಬೇಕು ಎಂಬ ವಿಶೇಷ ಸಂದೇಶ ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

52 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

59 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago