ಕ್ರೀಡೆ

ಭಾವನೆ ಬದಿಗಿಟ್ಟು, ವೃತ್ತಿಪರರಾಗಿ ಆಡಿ : ಆಟಗಾರರಿಗೆ ಗಂಭೀರ್‌ ಸಂದೇಶ

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ ಕೂಗು.

ಏಷ್ಯಾಕಪ್​ನ ವೇಳಾಪಟ್ಟಿ ಪ್ರಕಟವಾದಗಿನಿಂದಲೂ ಈ ಪಂದ್ಯದ ಬಗ್ಗೆ ಅಪಸ್ವರ ಕೇಳಿಬರುತ್ತಲೇ ಇದೆ. ಇದೀಗ ಪಂದ್ಯ ಹತ್ತಿರವಾದಂತೆ ರಾಜಕೀಯ ಪಕ್ಷಗಳಿಂದ ಹಿಡಿದು ಸಾರ್ವಜನಿಕರು ಕೂಡ ಈ ಪಂದ್ಯವನ್ನು ಟೀಂ ಇಂಡಿಯಾ ಆಡಬಾರದು ಎಂಬ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಭಾರತದಲ್ಲಿನ ಈ ವಾತಾವರಣ ಆಟಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ಆಟಗಾರರ ಮನೋಬಲವನ್ನು ಹೆಚ್ಚಿಸಲು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್​ ಆಟಗಾರರಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಒಂದು ದಿನ ಮೊದಲು ಪತ್ರಿಕಾಗೋಷ್ಠಿ ನಡೆದಿತು. ಈ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾದ ಯಾವ ಆಟಗಾರನೂ ಹಾಜರಿರಲಿಲ್ಲ. ಆಟಗಾರರ ಬದಲಿಗೆ ತಂಡದ ಪರವಾಗಿ ಸಹಾಯಕ ಕೋಚ್ ರಯಾನ್ ಟೆನ್​ಡೋಸ್ಚೇಟ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಆಟಗಾರರು ಪಂದ್ಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಕೇಳಿಕೊಂಡಿದ್ದಾರೆ. ಭಾರತದಲ್ಲಿ ಈ ಪಂದ್ಯದ ಬಗ್ಗೆ ಯಾವ ರೀತಿಯ ಅಭಿಪ್ರಾಯ ಕೇಳಿಬರುತ್ತಿದೆ ಎಂಬುದು ನಮಗೆ ತಿಳಿದಿದೆ.

ಆದರೆ ನಾವು ಭಾವನೆಗಳನ್ನು ಬದಿಗಿಟ್ಟು, ವೃತ್ತಿಪರರಾಗಿರಬೇಕು. ಆಟದ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಕು. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯವನ್ನು ಹೊಂದಿರುತ್ತಾರೆ ಆದರೆ ತಂಡದ ಗಮನ ಕ್ರಿಕೆಟ್ ಮೇಲೆ ಮಾತ್ರ ಇರಬೇಕು. ಇದು ಸೂಕ್ಷ್ಮ ವಿಷಯ. ಏಷ್ಯಾಕಪ್ ಬಹಳ ದಿನಗಳಿಂದ ಚರ್ಚೆಯ ವಿಷಯವಾಗಿತ್ತು. ಒಂದು ಸಮಯದಲ್ಲಿ ನಾವು ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ನಮಗೆ ಆಡುವ ಅವಕಾಶ ಸಿಕ್ಕಿದೆ. ಹೀಗಾಗಿ ಆಟಗಾರರು ಭಾವನೆಗಳನ್ನು ಬದಿಗಿಟ್ಟು ತಮ್ಮ ಕೆಲಸವನ್ನು ಮಾಡಬೇಕು ಎಂಬ ವಿಶೇಷ ಸಂದೇಶ ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

7 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

14 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

15 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

19 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

19 hours ago