ಕ್ರೀಡೆ

IPL 2024: ಕ್ವಾಲಿಫೈಯರ್‌-2ನಲ್ಲಿ ಎಲಿಮಿನೇಟ್‌ ಆದ ಆರ್‌ಆರ್‌: ನಾಲ್ಕನೇ ಬಾರಿಗೆ ಫೈನಲ್‌ ಪ್ರವೇಶಿಸಿದ ಹೈದರಾಬಾದ್‌

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಸೀಸನ್‌ನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ತಂಡದ ವಿರುದ್ಧ 36 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಕ್ವಾಲಿಫೈಯರ್‌-2 ಪಂದ್ಯ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೇ ಮೇ.26ರಂದು ಚೆನ್ನೈ ನ ಇದೇ ಚಿದಂಬರಂ ಕ್ರಿಡಾಂಗಣದಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 175 ರನ್‌ ಕಲೆಹಾಕಿ 176 ರನ್‌ಗಳ ಗುರಿ ನೀಡಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಸನ್‌ರೈಸರ್ಸ್‌ ಹೈದರಾಬಾದ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ಪರವಾಗಿ ಟ್ರಾವಿಸ್‌ ಹೆಡ್‌ ಹಾಗೂ ಅಭಿಷೇಕ್‌ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಟ್ರಾವಿಸ್‌ ಹೆಡ್‌ 34(28) ರನ್‌ ಗಳಿಸಿದರೇ, ಅಭಿಷೇಕ್‌ ಶರ್ಮಾ 12(5) ರನ್‌ ಗಳಿಸಿ ಔಟಾದರು.

ತಂಡಕ್ಕೆ ಮತ್ತೊಮ್ಮೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ರಾಹುಲ್‌ ತ್ರಿಪಾಟಿ 37(15) ರನ್‌, ಮಾರ್ಕ್ರಂ 1(2)ರನ್‌ ಗಳಿಸಿ ಕುಸಿತ ಕಂಡಿತು. ಈ ವೇಳೆ ಸುಭದ್ರವಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ವಿಕೇಟ್‌ ಕೀಪರ್‌ ಕ್ಲಾಸೆನ್‌ ತಂಡಕ್ಕೆ ಚೇತರಿಕೆಯ ಆಟವಾಡಿದರು. ಇವರು 34 ಎಸೆತ ಎದರಿಸಿ 4 ಸಿಕ್ಸರ್‌ ಸಹಿತ 50 ರನ್‌ ಬಾರಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಶ್ರಮಿಸಿದರು. ಉಳಿದಂತೆ ನಿತೀಶ್‌ ರೆಡ್ಡಿ 5(10)ರನ್‌, ಶಹಬಾಜ್‌ ಅಹ್ಮದ್‌ 18(18)ರನ್‌, ಅಬ್ದುಲ್‌ ಸಮದ್‌ ಡಕ್‌ಔಟ್‌, ಉನಾದ್ಕಟ್‌ 5(2) ಮತ್ತು ನಾಯಕ ಕಮಿನ್ಸ್‌ ಔಟಾಗದೇ 5(5) ರನ್‌ ಬಾರಿಸಿದರು.

ರಾಜಸ್ಥಾನ್‌ ಪರ ಟ್ರೆಂಟ್‌ ಬೌಲ್ಟ್‌ ಹಾಗೂ ಅವೇಶ್‌ ಖಾನ್‌ ತಲಾ ಮೂರು ವಿಕೆಟ್‌ ಪಡೆದರು. ಸಂದೀಪ್‌ ಶರ್ಮಾ 2 ವಿಕೆಟ್ ಕಬಳಿಸಿ ಮಿಂಚಿದರು.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್‌: ಸ್ಪಿನ್‌ ಸ್ನೇಹಿ ಪಿಚ್‌ನಲ್ಲಿ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ಗೆ ಪರವಾಗಿ ಆರಂಭಿಕರಾಗು ಟಾಮ್‌ ಕೊಹ್ಲರ್‌ ಕ್ಯಾಡ್ಮೋರ್‌ ಮತ್ತು ಜೈಸ್ವಾಲ್‌ ಕಣಕ್ಕಿಳಿದರು. ಟಾಮ್‌ ಕೊಹ್ಲರ್‌ ಕ್ಯಾಡ್ಮೋರ್‌ 10(16)ರನ್‌ ಗಳಿಸಿ ಔಟಾದರೇ, ಜೈಸ್ವಾಲ್‌ 42(21) ಉತ್ತಮ ಇನ್ನಿಂಗ್ಸ್‌ ಕಟ್ಟಿಕೊಟ್ಟು ಔಟಾದರು. ಬಳಿಕ ತಂಡ ದಿಢೀರ್‌ ಕುಸಿತ ಕಂಡಿತು. ಬಂದ ಯಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ.

ನಾಯಕ ಸಂಜು ಸ್ಯಾಮ್ಸನ್‌ 10(11)ರನ್‌, ರಿಯಾನ್‌ ಪರಾಗ್‌ 6(10)ರನ್‌, ರವಿಚಂದ್ರನ್‌ ಅಶ್ವಿನ್‌ ಡಕ್‌ಔಟ್‌ ಆದರೆ, ಹೆಟ್ಮಾಯರ್‌ 4(10)ರನ್‌, ರೋಮನ್‌ ಪೋವೆಲ್‌ 4(10) ಗಳಿಸಿ ಔಟಾದರು.

ಕೊನೆಯಲ್ಲಿ ಅಬ್ಬರಿಸಿದ ಧೃವ್‌ ಜುರೆಲ್‌ ಔಟಾಗದೇ 35 ಎಸೆತಗಳಲ್ಲಿ 7ಬೌಂಡರಿ 2 ಸಿಕ್ಸರ್‌ ಸಹಿತ 56 ರನ್‌ ಗಳಿಸಿಯೂ ತಂಡವನ್ನು ಗೆಲ್ಲಿಸಲು ಆಗಲಿಲ್ಲ. ಬೋಲ್ಟ್‌ ಯಾವುದೇ ರನ್‌ ಬಾರಿಸದೇ ನಾಟ್‌ಔಟ್‌ ಆಗಿ ಉಳಿದರು. ಬ್ಯಾಟಿಂಗ್‌ ವೈಫಲ್ಯದಿಂದಾಗಿ ಈ ಪಂದ್ಯ ಸೋತ ಆರ್‌ಆರ್‌ ಟೂರ್ನಿಯಲ್ಲಿ ಅಭಿಯಾನ ಮುಗಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ಹೈದರಾಬಾದ್‌ ಪರ ಷಹಬಾಜ್‌ ಅಹ್ಮದ್‌ 3, ಅಭಿಷೇಕ್‌ ಶರ್ಮಾ 2, ನಾಯಕ ಕಮಿನ್ಸ್‌ ಹಾಗೂ ನಟರಾಜನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago