ಕ್ರೀಡೆ

IPL 2024: ಕ್ವಾಲಿಫೈಯರ್‌-2ನಲ್ಲಿ ಎಲಿಮಿನೇಟ್‌ ಆದ ಆರ್‌ಆರ್‌: ನಾಲ್ಕನೇ ಬಾರಿಗೆ ಫೈನಲ್‌ ಪ್ರವೇಶಿಸಿದ ಹೈದರಾಬಾದ್‌

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಸೀಸನ್‌ನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ತಂಡದ ವಿರುದ್ಧ 36 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಕ್ವಾಲಿಫೈಯರ್‌-2 ಪಂದ್ಯ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೇ ಮೇ.26ರಂದು ಚೆನ್ನೈ ನ ಇದೇ ಚಿದಂಬರಂ ಕ್ರಿಡಾಂಗಣದಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 175 ರನ್‌ ಕಲೆಹಾಕಿ 176 ರನ್‌ಗಳ ಗುರಿ ನೀಡಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಸನ್‌ರೈಸರ್ಸ್‌ ಹೈದರಾಬಾದ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ಪರವಾಗಿ ಟ್ರಾವಿಸ್‌ ಹೆಡ್‌ ಹಾಗೂ ಅಭಿಷೇಕ್‌ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಟ್ರಾವಿಸ್‌ ಹೆಡ್‌ 34(28) ರನ್‌ ಗಳಿಸಿದರೇ, ಅಭಿಷೇಕ್‌ ಶರ್ಮಾ 12(5) ರನ್‌ ಗಳಿಸಿ ಔಟಾದರು.

ತಂಡಕ್ಕೆ ಮತ್ತೊಮ್ಮೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ರಾಹುಲ್‌ ತ್ರಿಪಾಟಿ 37(15) ರನ್‌, ಮಾರ್ಕ್ರಂ 1(2)ರನ್‌ ಗಳಿಸಿ ಕುಸಿತ ಕಂಡಿತು. ಈ ವೇಳೆ ಸುಭದ್ರವಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ವಿಕೇಟ್‌ ಕೀಪರ್‌ ಕ್ಲಾಸೆನ್‌ ತಂಡಕ್ಕೆ ಚೇತರಿಕೆಯ ಆಟವಾಡಿದರು. ಇವರು 34 ಎಸೆತ ಎದರಿಸಿ 4 ಸಿಕ್ಸರ್‌ ಸಹಿತ 50 ರನ್‌ ಬಾರಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಶ್ರಮಿಸಿದರು. ಉಳಿದಂತೆ ನಿತೀಶ್‌ ರೆಡ್ಡಿ 5(10)ರನ್‌, ಶಹಬಾಜ್‌ ಅಹ್ಮದ್‌ 18(18)ರನ್‌, ಅಬ್ದುಲ್‌ ಸಮದ್‌ ಡಕ್‌ಔಟ್‌, ಉನಾದ್ಕಟ್‌ 5(2) ಮತ್ತು ನಾಯಕ ಕಮಿನ್ಸ್‌ ಔಟಾಗದೇ 5(5) ರನ್‌ ಬಾರಿಸಿದರು.

ರಾಜಸ್ಥಾನ್‌ ಪರ ಟ್ರೆಂಟ್‌ ಬೌಲ್ಟ್‌ ಹಾಗೂ ಅವೇಶ್‌ ಖಾನ್‌ ತಲಾ ಮೂರು ವಿಕೆಟ್‌ ಪಡೆದರು. ಸಂದೀಪ್‌ ಶರ್ಮಾ 2 ವಿಕೆಟ್ ಕಬಳಿಸಿ ಮಿಂಚಿದರು.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್‌: ಸ್ಪಿನ್‌ ಸ್ನೇಹಿ ಪಿಚ್‌ನಲ್ಲಿ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ಗೆ ಪರವಾಗಿ ಆರಂಭಿಕರಾಗು ಟಾಮ್‌ ಕೊಹ್ಲರ್‌ ಕ್ಯಾಡ್ಮೋರ್‌ ಮತ್ತು ಜೈಸ್ವಾಲ್‌ ಕಣಕ್ಕಿಳಿದರು. ಟಾಮ್‌ ಕೊಹ್ಲರ್‌ ಕ್ಯಾಡ್ಮೋರ್‌ 10(16)ರನ್‌ ಗಳಿಸಿ ಔಟಾದರೇ, ಜೈಸ್ವಾಲ್‌ 42(21) ಉತ್ತಮ ಇನ್ನಿಂಗ್ಸ್‌ ಕಟ್ಟಿಕೊಟ್ಟು ಔಟಾದರು. ಬಳಿಕ ತಂಡ ದಿಢೀರ್‌ ಕುಸಿತ ಕಂಡಿತು. ಬಂದ ಯಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ.

ನಾಯಕ ಸಂಜು ಸ್ಯಾಮ್ಸನ್‌ 10(11)ರನ್‌, ರಿಯಾನ್‌ ಪರಾಗ್‌ 6(10)ರನ್‌, ರವಿಚಂದ್ರನ್‌ ಅಶ್ವಿನ್‌ ಡಕ್‌ಔಟ್‌ ಆದರೆ, ಹೆಟ್ಮಾಯರ್‌ 4(10)ರನ್‌, ರೋಮನ್‌ ಪೋವೆಲ್‌ 4(10) ಗಳಿಸಿ ಔಟಾದರು.

ಕೊನೆಯಲ್ಲಿ ಅಬ್ಬರಿಸಿದ ಧೃವ್‌ ಜುರೆಲ್‌ ಔಟಾಗದೇ 35 ಎಸೆತಗಳಲ್ಲಿ 7ಬೌಂಡರಿ 2 ಸಿಕ್ಸರ್‌ ಸಹಿತ 56 ರನ್‌ ಗಳಿಸಿಯೂ ತಂಡವನ್ನು ಗೆಲ್ಲಿಸಲು ಆಗಲಿಲ್ಲ. ಬೋಲ್ಟ್‌ ಯಾವುದೇ ರನ್‌ ಬಾರಿಸದೇ ನಾಟ್‌ಔಟ್‌ ಆಗಿ ಉಳಿದರು. ಬ್ಯಾಟಿಂಗ್‌ ವೈಫಲ್ಯದಿಂದಾಗಿ ಈ ಪಂದ್ಯ ಸೋತ ಆರ್‌ಆರ್‌ ಟೂರ್ನಿಯಲ್ಲಿ ಅಭಿಯಾನ ಮುಗಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ಹೈದರಾಬಾದ್‌ ಪರ ಷಹಬಾಜ್‌ ಅಹ್ಮದ್‌ 3, ಅಭಿಷೇಕ್‌ ಶರ್ಮಾ 2, ನಾಯಕ ಕಮಿನ್ಸ್‌ ಹಾಗೂ ನಟರಾಜನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

6 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

8 hours ago