ಕ್ರೀಡೆ

ಮ್ಯಾಗ್ನಸ್ ಕಾರ್ಲ್‌ನ್ ವಿರುದ್ಧ ಆರ್.ಪ್ರಜ್ಞಾನಂದಗೆ ಐತಿಹಾಸಿಕ ಗೆಲುವು

ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್‌ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರು ಅಗ, ಚೆಸ್ ಆಟಗಾರರು ಪಾಲ್ಗೊಂಡಿರುವ ಪ್ರತಿಷ್ಠಿತ ಚೆಸ್ ಟೂರ್ನಮೆಂಟ್‌ನಲ್ಲಿ ಬಿಳಿ ಕಾಯಿನ್ ಮುನ್ನಡೆಸಿದ ಪ್ರಜ್ಞಾನಂದ, ನಾರ್ವೆಯವರೇ ಆದ ವಿಶ್ವ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರಿಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂರನೇ ಸುತ್ತಿನ ಸ್ಪರ್ಧೆಯಲ್ಲಿ ಪ್ರಜ್ಞಾನಂದ 9 ಅಂಕಗಳ ಪೈಕಿ 5.5 ಅಂಕಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ದಾಖಲಿಸಿದರು.

ಕಳೆದ ವರ್ಷ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ಆರ್ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್‌ನ್‌ಗೆ ಶರಣಾಗಿದ್ದರು. ಇದೀಗ ಆ ಸೋಲಿಗೆ ನಾರ್ವೆಯಲ್ಲಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ 4ನೇ ಚೆಸ್ ಪಟು ಎನ್ನುವ ಹಿರಿಮೆಗೆ ಆ‌ ಪ್ರಜ್ಞಾನಂದ ಪಾತ್ರರಾಗಿದ್ದಾರೆ. ಇನ್ನು ಕುತೂಹಲಕಾರಿ ಸಂಗತಿಯೆಂದರೆ, ಆರ್.ಪ್ರಜ್ಞಾನಂದ ಅವರ ಸಹೋದರಿ ಆರ್. ವೈಶಾಲಿ, ನಾರ್ವೆ ಚೆಸ್ ಮಹಿಳಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಗ ಶ್ರೇಯಾಂಕ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

2 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

2 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

2 hours ago