ಕ್ರೀಡೆ

ಮ್ಯಾಗ್ನಸ್ ಕಾರ್ಲ್‌ನ್ ವಿರುದ್ಧ ಆರ್.ಪ್ರಜ್ಞಾನಂದಗೆ ಐತಿಹಾಸಿಕ ಗೆಲುವು

ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್‌ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರು ಅಗ, ಚೆಸ್ ಆಟಗಾರರು ಪಾಲ್ಗೊಂಡಿರುವ ಪ್ರತಿಷ್ಠಿತ ಚೆಸ್ ಟೂರ್ನಮೆಂಟ್‌ನಲ್ಲಿ ಬಿಳಿ ಕಾಯಿನ್ ಮುನ್ನಡೆಸಿದ ಪ್ರಜ್ಞಾನಂದ, ನಾರ್ವೆಯವರೇ ಆದ ವಿಶ್ವ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರಿಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂರನೇ ಸುತ್ತಿನ ಸ್ಪರ್ಧೆಯಲ್ಲಿ ಪ್ರಜ್ಞಾನಂದ 9 ಅಂಕಗಳ ಪೈಕಿ 5.5 ಅಂಕಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ದಾಖಲಿಸಿದರು.

ಕಳೆದ ವರ್ಷ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ಆರ್ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್‌ನ್‌ಗೆ ಶರಣಾಗಿದ್ದರು. ಇದೀಗ ಆ ಸೋಲಿಗೆ ನಾರ್ವೆಯಲ್ಲಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ 4ನೇ ಚೆಸ್ ಪಟು ಎನ್ನುವ ಹಿರಿಮೆಗೆ ಆ‌ ಪ್ರಜ್ಞಾನಂದ ಪಾತ್ರರಾಗಿದ್ದಾರೆ. ಇನ್ನು ಕುತೂಹಲಕಾರಿ ಸಂಗತಿಯೆಂದರೆ, ಆರ್.ಪ್ರಜ್ಞಾನಂದ ಅವರ ಸಹೋದರಿ ಆರ್. ವೈಶಾಲಿ, ನಾರ್ವೆ ಚೆಸ್ ಮಹಿಳಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಗ ಶ್ರೇಯಾಂಕ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago