ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರು ಅಗ, ಚೆಸ್ ಆಟಗಾರರು ಪಾಲ್ಗೊಂಡಿರುವ ಪ್ರತಿಷ್ಠಿತ ಚೆಸ್ ಟೂರ್ನಮೆಂಟ್ನಲ್ಲಿ ಬಿಳಿ ಕಾಯಿನ್ ಮುನ್ನಡೆಸಿದ ಪ್ರಜ್ಞಾನಂದ, ನಾರ್ವೆಯವರೇ ಆದ ವಿಶ್ವ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರಿಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರನೇ ಸುತ್ತಿನ ಸ್ಪರ್ಧೆಯಲ್ಲಿ ಪ್ರಜ್ಞಾನಂದ 9 ಅಂಕಗಳ ಪೈಕಿ 5.5 ಅಂಕಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ದಾಖಲಿಸಿದರು.
ಕಳೆದ ವರ್ಷ ನಡೆದ ಫಿಡೆ ಚೆಸ್ ವಿಶ್ವಕಪ್ನಲ್ಲಿ ಆರ್ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್ನ್ಗೆ ಶರಣಾಗಿದ್ದರು. ಇದೀಗ ಆ ಸೋಲಿಗೆ ನಾರ್ವೆಯಲ್ಲಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ 4ನೇ ಚೆಸ್ ಪಟು ಎನ್ನುವ ಹಿರಿಮೆಗೆ ಆ ಪ್ರಜ್ಞಾನಂದ ಪಾತ್ರರಾಗಿದ್ದಾರೆ. ಇನ್ನು ಕುತೂಹಲಕಾರಿ ಸಂಗತಿಯೆಂದರೆ, ಆರ್.ಪ್ರಜ್ಞಾನಂದ ಅವರ ಸಹೋದರಿ ಆರ್. ವೈಶಾಲಿ, ನಾರ್ವೆ ಚೆಸ್ ಮಹಿಳಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಗ ಶ್ರೇಯಾಂಕ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…