ಕ್ರೀಡೆ

ಏಕದಿನ ವಿಶ್ವಕಪ್ ನಲ್ಲಿ ಸಚಿನ್ ದಾಖಲೆ ಮುರಿದ ರಚಿನ್

ಬೆಂಗಳೂರು : ಇಲ್ಲಿನ ಎಮ್ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಯುವ ಬ್ಯಾಟರ್ ರಚಿನ್ ರವೀಂದ್ರ ಶತಕ ಬಾರಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ರಚಿನ್ ರವೀಂದ್ರ ಅವರು ಹಲವು ದಾಖಲೆಗಳನ್ನು ಸೃಷ್ಟಿಸಿದರು. 25 ವರ್ಷ ತುಂಬುವುದರೊಳಗೆ ವಿಶ್ವಕಪ್ ನಲ್ಲಿ ಮೂರು ಶತಕ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆ ಬರೆದರು. ಈ ಹಿಂದೆ ಸಚಿನ್ ತೆಂಡೂಲ್ಕರ್ ಎರಡು ಶತಕ ಬಾರಿಸಿದ ದಾಖಲೆ ಹೊಂದಿದ್ದರು. ರಚಿನ್ ಅವರ ವಯಸ್ಸು 23 ಆಗಿದೆ.

ಭಾರತ ಮೂಲದವರಾದ ರಚಿನ್ ರವೀಂದ್ರ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಇದುವರೆಗೆ ಒಂದೇ ಋತುವಿನಲ್ಲಿ ಮೂರು ಶತಕ ಬಾರಿಸಿ ನ್ಯೂಝಿಲ್ಯಾಂಡ್ ಪರ ವಿಶ್ವಕಪ್ ನಲ್ಲಿ 3 ಶತಕ ಬಾರಿಸಿದ ಕಿವೀಸ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ರಚಿನ್ 25 ವರ್ಷ ತುಂಬುವುದರ ಒಳಗೆ ಒಂದೇ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಲ್ಲಿಯೂ ಸಚಿನ್ ಅವರನ್ನು ರಚಿನ್ ಸರಿಗಟ್ಟಿದ್ದಾರೆ. 1996ರ ವಿಶ್ವಕಪ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರು 523 ರನ್ ಬಾರಿಸಿದ್ದರು. ಸದ್ಯ ರಚಿನ್ ರವೀಂದ್ರ ಕೂಡ 523 ರನ್ ಬಾರಿಸಿದ್ದಾರೆ. ಮುಂದೆ ಒಂದು ರನ್ ಗಳಿಕೆ ಕಂಡರೂ ರಚಿನ್ ದಾಖಲೆ ಬರೆಯಲಿದ್ದಾರೆ

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

7 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

8 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

8 hours ago