ಕ್ರೀಡೆ

ಏಕದಿನ ವಿಶ್ವಕಪ್ ನಲ್ಲಿ ಸಚಿನ್ ದಾಖಲೆ ಮುರಿದ ರಚಿನ್

ಬೆಂಗಳೂರು : ಇಲ್ಲಿನ ಎಮ್ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಯುವ ಬ್ಯಾಟರ್ ರಚಿನ್ ರವೀಂದ್ರ ಶತಕ ಬಾರಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ರಚಿನ್ ರವೀಂದ್ರ ಅವರು ಹಲವು ದಾಖಲೆಗಳನ್ನು ಸೃಷ್ಟಿಸಿದರು. 25 ವರ್ಷ ತುಂಬುವುದರೊಳಗೆ ವಿಶ್ವಕಪ್ ನಲ್ಲಿ ಮೂರು ಶತಕ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆ ಬರೆದರು. ಈ ಹಿಂದೆ ಸಚಿನ್ ತೆಂಡೂಲ್ಕರ್ ಎರಡು ಶತಕ ಬಾರಿಸಿದ ದಾಖಲೆ ಹೊಂದಿದ್ದರು. ರಚಿನ್ ಅವರ ವಯಸ್ಸು 23 ಆಗಿದೆ.

ಭಾರತ ಮೂಲದವರಾದ ರಚಿನ್ ರವೀಂದ್ರ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಇದುವರೆಗೆ ಒಂದೇ ಋತುವಿನಲ್ಲಿ ಮೂರು ಶತಕ ಬಾರಿಸಿ ನ್ಯೂಝಿಲ್ಯಾಂಡ್ ಪರ ವಿಶ್ವಕಪ್ ನಲ್ಲಿ 3 ಶತಕ ಬಾರಿಸಿದ ಕಿವೀಸ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ರಚಿನ್ 25 ವರ್ಷ ತುಂಬುವುದರ ಒಳಗೆ ಒಂದೇ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಲ್ಲಿಯೂ ಸಚಿನ್ ಅವರನ್ನು ರಚಿನ್ ಸರಿಗಟ್ಟಿದ್ದಾರೆ. 1996ರ ವಿಶ್ವಕಪ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರು 523 ರನ್ ಬಾರಿಸಿದ್ದರು. ಸದ್ಯ ರಚಿನ್ ರವೀಂದ್ರ ಕೂಡ 523 ರನ್ ಬಾರಿಸಿದ್ದಾರೆ. ಮುಂದೆ ಒಂದು ರನ್ ಗಳಿಕೆ ಕಂಡರೂ ರಚಿನ್ ದಾಖಲೆ ಬರೆಯಲಿದ್ದಾರೆ

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

54 seconds ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

43 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago