ಕ್ರೀಡೆ

ಏಕದಿನ ವಿಶ್ವಕಪ್ ನಲ್ಲಿ ಸಚಿನ್ ದಾಖಲೆ ಮುರಿದ ರಚಿನ್

ಬೆಂಗಳೂರು : ಇಲ್ಲಿನ ಎಮ್ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಯುವ ಬ್ಯಾಟರ್ ರಚಿನ್ ರವೀಂದ್ರ ಶತಕ ಬಾರಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ರಚಿನ್ ರವೀಂದ್ರ ಅವರು ಹಲವು ದಾಖಲೆಗಳನ್ನು ಸೃಷ್ಟಿಸಿದರು. 25 ವರ್ಷ ತುಂಬುವುದರೊಳಗೆ ವಿಶ್ವಕಪ್ ನಲ್ಲಿ ಮೂರು ಶತಕ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆ ಬರೆದರು. ಈ ಹಿಂದೆ ಸಚಿನ್ ತೆಂಡೂಲ್ಕರ್ ಎರಡು ಶತಕ ಬಾರಿಸಿದ ದಾಖಲೆ ಹೊಂದಿದ್ದರು. ರಚಿನ್ ಅವರ ವಯಸ್ಸು 23 ಆಗಿದೆ.

ಭಾರತ ಮೂಲದವರಾದ ರಚಿನ್ ರವೀಂದ್ರ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಇದುವರೆಗೆ ಒಂದೇ ಋತುವಿನಲ್ಲಿ ಮೂರು ಶತಕ ಬಾರಿಸಿ ನ್ಯೂಝಿಲ್ಯಾಂಡ್ ಪರ ವಿಶ್ವಕಪ್ ನಲ್ಲಿ 3 ಶತಕ ಬಾರಿಸಿದ ಕಿವೀಸ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ರಚಿನ್ 25 ವರ್ಷ ತುಂಬುವುದರ ಒಳಗೆ ಒಂದೇ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಲ್ಲಿಯೂ ಸಚಿನ್ ಅವರನ್ನು ರಚಿನ್ ಸರಿಗಟ್ಟಿದ್ದಾರೆ. 1996ರ ವಿಶ್ವಕಪ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರು 523 ರನ್ ಬಾರಿಸಿದ್ದರು. ಸದ್ಯ ರಚಿನ್ ರವೀಂದ್ರ ಕೂಡ 523 ರನ್ ಬಾರಿಸಿದ್ದಾರೆ. ಮುಂದೆ ಒಂದು ರನ್ ಗಳಿಕೆ ಕಂಡರೂ ರಚಿನ್ ದಾಖಲೆ ಬರೆಯಲಿದ್ದಾರೆ

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago