ಕ್ರೀಡೆ

5 ಕೋಟಿ ರೂ ಬಹುಮಾನ ಮೊತ್ತ ನಿರಾಕರಿಸಿದ ರಾಹುಲ್‌ ದ್ರಾವಿಡ್‌

ನವದೆಹಲಿ: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ ಪಡೆದಿರುವ ರಾಹುಲ್‌ ದ್ರಾವಿಡ್‌ ತಮ್ಮ ಹಣದಲ್ಲಿ ಕಡಿತ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ.

ಟಿ20 ವಿಶ್ವಕಪ್‌ ಗೆದ್ದ ಟೀಮ್‌ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತ ನೀಡಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್‌ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ತಲಾ 5 ಕೋಟಿ ರೂ ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.

ಆದರೆ ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್‌ ರಾಹುಲ್‌ ದ್ರಾವಿಡ್‌ ಇದೀಗ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ.

ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದ ಪ್ರಕಾರ ರಾಹುಲ್‌ ದ್ರಾವಿಡ್‌ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.

ಇಲ್ಲಿ ರಾಹುಲ್‌ ದ್ರಾವಿಡ್‌ ಜೊತೆ ಕಾರ್ಯ ನಿರ್ವಹಿಸಿದ ಟೀಮ್‌ ಇಂಡಿಯಾದ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋರ್‌, ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಮತ್ತು ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಅವರಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.

ಈ ಅಸಮಾನತೆಯನ್ನು ಹೋಗಲಾಡಿಸಲು ಖುದ್ದು ರಾಹುಲ್‌ ದ್ರಾವಿಡ್‌ 2.5 ಕೋಟಿ ರೂ ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐ ಅಧಿಕಾರಿಗೆ ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

1 hour ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

1 hour ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

1 hour ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

1 hour ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

9 hours ago