ನವದೆಹಲಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ ಪಡೆದಿರುವ ರಾಹುಲ್ ದ್ರಾವಿಡ್ ತಮ್ಮ ಹಣದಲ್ಲಿ ಕಡಿತ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತ ನೀಡಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಆದರೆ ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್ ರಾಹುಲ್ ದ್ರಾವಿಡ್ ಇದೀಗ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ.
ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದ ಪ್ರಕಾರ ರಾಹುಲ್ ದ್ರಾವಿಡ್ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಇಲ್ಲಿ ರಾಹುಲ್ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ ನಿಗದಿ ಮಾಡಲಾಗಿದೆ.
ಈ ಅಸಮಾನತೆಯನ್ನು ಹೋಗಲಾಡಿಸಲು ಖುದ್ದು ರಾಹುಲ್ ದ್ರಾವಿಡ್ 2.5 ಕೋಟಿ ರೂ ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐ ಅಧಿಕಾರಿಗೆ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…