ಕ್ರೀಡೆ

IND vs NZ : ಮಳೆಯಿಂದ ಏಕದಿನ ಪಂದ್ಯ ರದ್ದು

ಕಾಂಗರೂಗಳ ನಾಡಲ್ಲಿ ಸರಣಿ ಗೆಲ್ಲುವ ಭಾರತದ ಕನಸು ಭಗ್ನ, ಸಮಬಲಕ್ಕೆ ಕೊನೆಯ ಪಂದ್ಯ ನಿರ್ಣಾಯಕ

ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆರಂಭಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಜೋಡಿ 4.5 ಓವರ್‌ಗಳಲ್ಲಿ 22 ರನ್ ಗಳಿಸಿತು. ಈ ವೇಳೆ ಮಳೆ ತನ್ನ ಆಟವನ್ನು ತೋರಿಸಿದ್ದರಿಂದ ಆಟಗಾರರು ಡ್ರೆಸ್ಸಿಂಗ್ ಕೋಣೆಗೆ ಮರಳಬೇಕಾಯಿತು. ಇದಾದ ಬಳಿಕ ಮತ್ತೆ ಪಂದ್ಯ ಆರಂಭಗೊಂಡು ಭಾರತ 12.5 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 89 ರನ್ ಗಳಿಸಿತ್ತು. ಆದರೆ ಮತ್ತೆ ಮಳೆಯಿಂದಾಗಿ ಪಂದ್ಯವನ್ನು ಎರಡನೇ ಬಾರಿಗೆ ನಿಲ್ಲಿಸಲಾಯಿತು. ಹ್ಯಾಮಿಲ್ಟನ್‌ನಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಸುದೀರ್ಘ ಕಾಯುವಿಕೆಯ ನಂತರ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ತಲಾ 29 ಓವರ್​ಗಳ ಪಂದ್ಯ

ಆಕ್ಲೆಂಡ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ 7 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಹೀಗಾಗಿ ಹ್ಯಾಮಿಲ್ಟನ್‌ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಭಾರತಕ್ಕೆ ಅವಕಾಶವಿತ್ತು. ಆದರೆ ಮಳೆ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿತು. ಮಧ್ಯದಲ್ಲಿ ಸ್ವಲ್ಪ ಹೊತ್ತು ಮಳೆ ನಿಂತಿದ್ದರಿಂದ ಪಂದ್ಯವನ್ನು ತಲಾ 29 ಓವರ್‌ಗಳಿಗೆ ಕಡಿತಗೊಳಿಸಲಾಯಿತು. ಈ ವೇಳೆ ಮತ್ತೆ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಧವನ್ ವಿಕೆಟ್ ರೂಪದಲ್ಲಿ ಆಘಾತ ಎದುರಾಯಿತು. ಆದರೆ ಆ ಬಳಿಕ ಜೊತೆಯಾದ ಗಿಲ್ ಮತ್ತು ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್​ಗೆ ಮುಂದಾದರು.

ಸೂರ್ಯ- -ಗಿಲ್ ಸ್ಫೋಟಕ ಬ್ಯಾಟಿಂಗ್
ಅದರಲ್ಲೂ ಕಿವೀಸ್ ಬೌಲರ್​ಗಳ ಮೇಲೆ ಅಬ್ಬರಿಸಿದ ಸೂರ್ಯ ಆರಂಭಿಕ ಓವರ್​ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದರೂ ನಂತರ ತಮ್ಮ ಎಂದಿನ ಬ್ಯಾಟಿಂಗ್​ ಶೈಲಿಯನ್ನು ಆರಂಭಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 25 ಎಸೆತಗಳನ್ನು ಎದುರಿಸಿದ ಸೂರ್ಯ ಮೂರು ಭರ್ಜರಿ ಸಿಕ್ಸರ್ ಹಾಗೂ ಎರಡು ಬೌಂಡರಿಗಳ ಸಹಾಯದಿಂದ ಅಜೇಯ 34 ರನ್ ಗಳಿಸಿದರೆ, ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್, 42 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 45 ರನ್ ಕಲೆಹಾಕಿದರು.

ಸರಣಿ ಸಮಬಲಗೊಳಿಸುವ ಅವಕಾಶ

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೋತಿರುವ ಧವನ್ ಪಡೆ ಈ ಪಂದ್ಯವನ್ನು ಗೆದ್ದು ಸರಣಿ ಜೀವಂತವಾಗಿರಿಸಲು ಪ್ರಯತ್ನಿಸಿತ್ತು. ಆದರೆ ಈಗ ಪಂದ್ಯ ರದ್ದಾಗಿರುವುದರಿಂದ ಕಿವೀಸ್ ನಾಡಲ್ಲಿ ಏಕದಿನ ಸರಣಿ ಗೆಲ್ಲುವ ಅವಕಾಶವನ್ನು ಶಿಖರ್ ಧವನ್ ಪಡೆ ಕಳೆದುಕೊಂಡಿದೆ. ಆದರೆ ಸರಣಿ ಸೋಲನ್ನು ತಪ್ಪಿಸಲು ಇನ್ನೂ ಅವಕಾಶವಿದ್ದು, ಇದಕ್ಕಾಗಿ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಒಂದು ವೇಳೆ ಕೊನೆಯ ಪಂದ್ಯಕ್ಕೂ ಮಳೆಕಾಟ ನೀಡಿ ಪಂದ್ಯ ರದ್ದಾದರೆ ಏಕದಿನ ಸರಣಿ ಕಿವೀಸ್ ಪಾಲಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆಯೇ ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

andolanait

Recent Posts

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

21 mins ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

38 mins ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

44 mins ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

1 hour ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

1 hour ago

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…

2 hours ago