ಕ್ರೀಡೆ

IND vs NZ : ಮಳೆಯಿಂದ ಏಕದಿನ ಪಂದ್ಯ ರದ್ದು

ಕಾಂಗರೂಗಳ ನಾಡಲ್ಲಿ ಸರಣಿ ಗೆಲ್ಲುವ ಭಾರತದ ಕನಸು ಭಗ್ನ, ಸಮಬಲಕ್ಕೆ ಕೊನೆಯ ಪಂದ್ಯ ನಿರ್ಣಾಯಕ

ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆರಂಭಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಜೋಡಿ 4.5 ಓವರ್‌ಗಳಲ್ಲಿ 22 ರನ್ ಗಳಿಸಿತು. ಈ ವೇಳೆ ಮಳೆ ತನ್ನ ಆಟವನ್ನು ತೋರಿಸಿದ್ದರಿಂದ ಆಟಗಾರರು ಡ್ರೆಸ್ಸಿಂಗ್ ಕೋಣೆಗೆ ಮರಳಬೇಕಾಯಿತು. ಇದಾದ ಬಳಿಕ ಮತ್ತೆ ಪಂದ್ಯ ಆರಂಭಗೊಂಡು ಭಾರತ 12.5 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 89 ರನ್ ಗಳಿಸಿತ್ತು. ಆದರೆ ಮತ್ತೆ ಮಳೆಯಿಂದಾಗಿ ಪಂದ್ಯವನ್ನು ಎರಡನೇ ಬಾರಿಗೆ ನಿಲ್ಲಿಸಲಾಯಿತು. ಹ್ಯಾಮಿಲ್ಟನ್‌ನಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಸುದೀರ್ಘ ಕಾಯುವಿಕೆಯ ನಂತರ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ತಲಾ 29 ಓವರ್​ಗಳ ಪಂದ್ಯ

ಆಕ್ಲೆಂಡ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ 7 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಹೀಗಾಗಿ ಹ್ಯಾಮಿಲ್ಟನ್‌ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಭಾರತಕ್ಕೆ ಅವಕಾಶವಿತ್ತು. ಆದರೆ ಮಳೆ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿತು. ಮಧ್ಯದಲ್ಲಿ ಸ್ವಲ್ಪ ಹೊತ್ತು ಮಳೆ ನಿಂತಿದ್ದರಿಂದ ಪಂದ್ಯವನ್ನು ತಲಾ 29 ಓವರ್‌ಗಳಿಗೆ ಕಡಿತಗೊಳಿಸಲಾಯಿತು. ಈ ವೇಳೆ ಮತ್ತೆ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಧವನ್ ವಿಕೆಟ್ ರೂಪದಲ್ಲಿ ಆಘಾತ ಎದುರಾಯಿತು. ಆದರೆ ಆ ಬಳಿಕ ಜೊತೆಯಾದ ಗಿಲ್ ಮತ್ತು ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್​ಗೆ ಮುಂದಾದರು.

ಸೂರ್ಯ- -ಗಿಲ್ ಸ್ಫೋಟಕ ಬ್ಯಾಟಿಂಗ್
ಅದರಲ್ಲೂ ಕಿವೀಸ್ ಬೌಲರ್​ಗಳ ಮೇಲೆ ಅಬ್ಬರಿಸಿದ ಸೂರ್ಯ ಆರಂಭಿಕ ಓವರ್​ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದರೂ ನಂತರ ತಮ್ಮ ಎಂದಿನ ಬ್ಯಾಟಿಂಗ್​ ಶೈಲಿಯನ್ನು ಆರಂಭಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 25 ಎಸೆತಗಳನ್ನು ಎದುರಿಸಿದ ಸೂರ್ಯ ಮೂರು ಭರ್ಜರಿ ಸಿಕ್ಸರ್ ಹಾಗೂ ಎರಡು ಬೌಂಡರಿಗಳ ಸಹಾಯದಿಂದ ಅಜೇಯ 34 ರನ್ ಗಳಿಸಿದರೆ, ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್, 42 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 45 ರನ್ ಕಲೆಹಾಕಿದರು.

ಸರಣಿ ಸಮಬಲಗೊಳಿಸುವ ಅವಕಾಶ

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೋತಿರುವ ಧವನ್ ಪಡೆ ಈ ಪಂದ್ಯವನ್ನು ಗೆದ್ದು ಸರಣಿ ಜೀವಂತವಾಗಿರಿಸಲು ಪ್ರಯತ್ನಿಸಿತ್ತು. ಆದರೆ ಈಗ ಪಂದ್ಯ ರದ್ದಾಗಿರುವುದರಿಂದ ಕಿವೀಸ್ ನಾಡಲ್ಲಿ ಏಕದಿನ ಸರಣಿ ಗೆಲ್ಲುವ ಅವಕಾಶವನ್ನು ಶಿಖರ್ ಧವನ್ ಪಡೆ ಕಳೆದುಕೊಂಡಿದೆ. ಆದರೆ ಸರಣಿ ಸೋಲನ್ನು ತಪ್ಪಿಸಲು ಇನ್ನೂ ಅವಕಾಶವಿದ್ದು, ಇದಕ್ಕಾಗಿ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಒಂದು ವೇಳೆ ಕೊನೆಯ ಪಂದ್ಯಕ್ಕೂ ಮಳೆಕಾಟ ನೀಡಿ ಪಂದ್ಯ ರದ್ದಾದರೆ ಏಕದಿನ ಸರಣಿ ಕಿವೀಸ್ ಪಾಲಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆಯೇ ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

andolanait

Recent Posts

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

3 hours ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

3 hours ago

ಹೆಸರಿಗಷ್ಟೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ!

ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ  ಗುಂಡ್ಲುಪೇಟೆ:…

3 hours ago

ಎಲೆ ತೋಟ; ಸ್ಥಳೀಯರಿಗೆ ಅನೈರ್ಮಲ್ಯದ ಸಂಕಟ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…

3 hours ago

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

16 hours ago