ಕ್ರೀಡೆ

IND vs NZ : ಮಳೆಯಿಂದ ಏಕದಿನ ಪಂದ್ಯ ರದ್ದು

ಕಾಂಗರೂಗಳ ನಾಡಲ್ಲಿ ಸರಣಿ ಗೆಲ್ಲುವ ಭಾರತದ ಕನಸು ಭಗ್ನ, ಸಮಬಲಕ್ಕೆ ಕೊನೆಯ ಪಂದ್ಯ ನಿರ್ಣಾಯಕ

ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆರಂಭಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಜೋಡಿ 4.5 ಓವರ್‌ಗಳಲ್ಲಿ 22 ರನ್ ಗಳಿಸಿತು. ಈ ವೇಳೆ ಮಳೆ ತನ್ನ ಆಟವನ್ನು ತೋರಿಸಿದ್ದರಿಂದ ಆಟಗಾರರು ಡ್ರೆಸ್ಸಿಂಗ್ ಕೋಣೆಗೆ ಮರಳಬೇಕಾಯಿತು. ಇದಾದ ಬಳಿಕ ಮತ್ತೆ ಪಂದ್ಯ ಆರಂಭಗೊಂಡು ಭಾರತ 12.5 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 89 ರನ್ ಗಳಿಸಿತ್ತು. ಆದರೆ ಮತ್ತೆ ಮಳೆಯಿಂದಾಗಿ ಪಂದ್ಯವನ್ನು ಎರಡನೇ ಬಾರಿಗೆ ನಿಲ್ಲಿಸಲಾಯಿತು. ಹ್ಯಾಮಿಲ್ಟನ್‌ನಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಸುದೀರ್ಘ ಕಾಯುವಿಕೆಯ ನಂತರ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ತಲಾ 29 ಓವರ್​ಗಳ ಪಂದ್ಯ

ಆಕ್ಲೆಂಡ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ 7 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಹೀಗಾಗಿ ಹ್ಯಾಮಿಲ್ಟನ್‌ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಭಾರತಕ್ಕೆ ಅವಕಾಶವಿತ್ತು. ಆದರೆ ಮಳೆ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿತು. ಮಧ್ಯದಲ್ಲಿ ಸ್ವಲ್ಪ ಹೊತ್ತು ಮಳೆ ನಿಂತಿದ್ದರಿಂದ ಪಂದ್ಯವನ್ನು ತಲಾ 29 ಓವರ್‌ಗಳಿಗೆ ಕಡಿತಗೊಳಿಸಲಾಯಿತು. ಈ ವೇಳೆ ಮತ್ತೆ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಧವನ್ ವಿಕೆಟ್ ರೂಪದಲ್ಲಿ ಆಘಾತ ಎದುರಾಯಿತು. ಆದರೆ ಆ ಬಳಿಕ ಜೊತೆಯಾದ ಗಿಲ್ ಮತ್ತು ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್​ಗೆ ಮುಂದಾದರು.

ಸೂರ್ಯ- -ಗಿಲ್ ಸ್ಫೋಟಕ ಬ್ಯಾಟಿಂಗ್
ಅದರಲ್ಲೂ ಕಿವೀಸ್ ಬೌಲರ್​ಗಳ ಮೇಲೆ ಅಬ್ಬರಿಸಿದ ಸೂರ್ಯ ಆರಂಭಿಕ ಓವರ್​ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದರೂ ನಂತರ ತಮ್ಮ ಎಂದಿನ ಬ್ಯಾಟಿಂಗ್​ ಶೈಲಿಯನ್ನು ಆರಂಭಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 25 ಎಸೆತಗಳನ್ನು ಎದುರಿಸಿದ ಸೂರ್ಯ ಮೂರು ಭರ್ಜರಿ ಸಿಕ್ಸರ್ ಹಾಗೂ ಎರಡು ಬೌಂಡರಿಗಳ ಸಹಾಯದಿಂದ ಅಜೇಯ 34 ರನ್ ಗಳಿಸಿದರೆ, ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್, 42 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 45 ರನ್ ಕಲೆಹಾಕಿದರು.

ಸರಣಿ ಸಮಬಲಗೊಳಿಸುವ ಅವಕಾಶ

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೋತಿರುವ ಧವನ್ ಪಡೆ ಈ ಪಂದ್ಯವನ್ನು ಗೆದ್ದು ಸರಣಿ ಜೀವಂತವಾಗಿರಿಸಲು ಪ್ರಯತ್ನಿಸಿತ್ತು. ಆದರೆ ಈಗ ಪಂದ್ಯ ರದ್ದಾಗಿರುವುದರಿಂದ ಕಿವೀಸ್ ನಾಡಲ್ಲಿ ಏಕದಿನ ಸರಣಿ ಗೆಲ್ಲುವ ಅವಕಾಶವನ್ನು ಶಿಖರ್ ಧವನ್ ಪಡೆ ಕಳೆದುಕೊಂಡಿದೆ. ಆದರೆ ಸರಣಿ ಸೋಲನ್ನು ತಪ್ಪಿಸಲು ಇನ್ನೂ ಅವಕಾಶವಿದ್ದು, ಇದಕ್ಕಾಗಿ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಒಂದು ವೇಳೆ ಕೊನೆಯ ಪಂದ್ಯಕ್ಕೂ ಮಳೆಕಾಟ ನೀಡಿ ಪಂದ್ಯ ರದ್ದಾದರೆ ಏಕದಿನ ಸರಣಿ ಕಿವೀಸ್ ಪಾಲಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆಯೇ ಹ್ಯಾಮಿಲ್ಟನ್​ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago