Chennai Super Kings cricketer Suresh Raina (L) raises his bat to celebrate his half century (50 runs) next to teammate Mahendra Singh Dhoni during the 2019 Indian Premier League (IPL) Twenty20 cricket match between Chennai Super Kings and Delhi Capitals at the M.A. Chidambaram Stadium in Chennai on May 1, 2019. (Photo by ARUN SANKAR / AFP) / ----IMAGE RESTRICTED TO EDITORIAL USE - STRICTLY NO COMMERCIAL USE-----
ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ ಹೇಳಿಕೊಂಡಿದ್ದಾರೆ.
2021ರ ಸೀಸನ್ ನಲ್ಲಿ ಸಿಎಸ್ ಕೆ ತಂಡದಲ್ಲಿ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪಗೆ ಅವಕಾಶ ನೀಡಲಾಗಿತ್ತು. ಇದೀಗ ಉತ್ತಪ್ಪ ಜೊತೆಗಿನ ಮಾತುಕತೆ ವೇಳೆ ರೈನಾ ಇದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
‘ನಾನು ಮತ್ತು ಧೋನಿ ಮಾತನಾಡಿದಾಗ, ನೀವು ರಾಬಿನ್ ಉತ್ತಪ್ಪ ಅವರನ್ನು ಆಡಿಸಬಹುದು ಎಂದು ಹೇಳಿದ್ದೆ, ನಿಮ್ಮನ್ನು ಚಾಂಪಿಯನ್ ಮಾಡುವ ವ್ಯಕ್ತಿ ಆತ ಎಂದು ಹೇಳಿದ್ದೆ’ ಎಂದು ರೈನಾ ಮೆಲುಕು ಹಾಕಿದ್ದಾರೆ.
ತನ್ನನ್ನು ಆಡುವ ಬಳಗದಿಂದ ಹೊರಗಿಡುವ ನಿರ್ಧಾರವನ್ನು ಧೋನಿ ಹೇಗೆ ತೆಗೆದುಕೊಂಡರು ಎಂದು ರೈನಾ ಹೇಳಿದರು.
“ಒಮ್ಮೆ ಎಂಎಸ್ ಧೋನಿ ನನ್ನ ಬಳಿ ಬಂದು ‘ನಾವು 2008 ರಿಂದ ಒಟ್ಟಿಗೆ ಆಡಿದ್ದೇವೆ, ಆದರೆ ನಾನು ಈ ಋತುವಿನಲ್ಲಿ ಗೆಲ್ಲಲು ಬಯಸುತ್ತೇನೆ. ಈಗ, ನೀವು ಏನು ಮಾಡಬೇಕೆಂದು ನನಗೆ ಹೇಳಿ’ ಎಂದು ಕೇಳಿದರು. ಅದಕ್ಕೆ ನಾನು ‘ರಾಬಿನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ ಮತ್ತು ಫೈನಲ್ ವರೆಗೆ ಅವರು ಆಡುವ ಬಳಗದಲ್ಲಿ ಉಳಿಯುತ್ತಾರೆಂದು ಖಚಿತಪಡಿಸಿ. ನೀವು ಗೆದ್ದರೆ, ಸಿಎಸ್ ಕೆ ಗೆಲ್ಲುತ್ತದೆ. ನಾನು ಆಡಲಿ ಅಥವಾ ಅವನು, ರಾಬಿನ್ ಮತ್ತು ರೈನಾ ಒಂದೇ,” ಎಂದು ರೈನಾ ಹೇಳಿದರು.
2021 ರ ಐಪಿಎಲ್ ನಲ್ಲಿ ಉತ್ತಪ್ಪ ನಾಲ್ಕು ಪಂದ್ಯಗಳಲ್ಲಿ 136.90 ಸ್ಟ್ರೈಕ್ ರೇಟ್ ನೊಂದಿಗೆ 115 ರನ್ ಗಳನ್ನು ಗಳಿಸಿದ್ದರು, ಸಿಎಸ್ಕೆ ತಂಡವು ಫೈನಲ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 27 ರನ್ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…