ಕ್ರೀಡೆ

ಸಿಎಸ್‌ಕೆ ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ

ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ ಹೇಳಿಕೊಂಡಿದ್ದಾರೆ.

2021ರ ಸೀಸನ್ ನಲ್ಲಿ ಸಿಎಸ್ ಕೆ ತಂಡದಲ್ಲಿ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪಗೆ ಅವಕಾಶ ನೀಡಲಾಗಿತ್ತು. ಇದೀಗ ಉತ್ತಪ್ಪ ಜೊತೆಗಿನ ಮಾತುಕತೆ ವೇಳೆ ರೈನಾ ಇದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

‘ನಾನು ಮತ್ತು ಧೋನಿ ಮಾತನಾಡಿದಾಗ, ನೀವು ರಾಬಿನ್ ಉತ್ತಪ್ಪ ಅವರನ್ನು ಆಡಿಸಬಹುದು ಎಂದು ಹೇಳಿದ್ದೆ, ನಿಮ್ಮನ್ನು ಚಾಂಪಿಯನ್ ಮಾಡುವ ವ್ಯಕ್ತಿ ಆತ ಎಂದು ಹೇಳಿದ್ದೆ’ ಎಂದು ರೈನಾ ಮೆಲುಕು ಹಾಕಿದ್ದಾರೆ.

ತನ್ನನ್ನು ಆಡುವ ಬಳಗದಿಂದ ಹೊರಗಿಡುವ ನಿರ್ಧಾರವನ್ನು ಧೋನಿ ಹೇಗೆ ತೆಗೆದುಕೊಂಡರು ಎಂದು ರೈನಾ ಹೇಳಿದರು.

“ಒಮ್ಮೆ ಎಂಎಸ್ ಧೋನಿ ನನ್ನ ಬಳಿ ಬಂದು ‘ನಾವು 2008 ರಿಂದ ಒಟ್ಟಿಗೆ ಆಡಿದ್ದೇವೆ, ಆದರೆ ನಾನು ಈ ಋತುವಿನಲ್ಲಿ ಗೆಲ್ಲಲು ಬಯಸುತ್ತೇನೆ. ಈಗ, ನೀವು ಏನು ಮಾಡಬೇಕೆಂದು ನನಗೆ ಹೇಳಿ’ ಎಂದು ಕೇಳಿದರು. ಅದಕ್ಕೆ ನಾನು ‘ರಾಬಿನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ ಮತ್ತು ಫೈನಲ್ ವರೆಗೆ ಅವರು ಆಡುವ ಬಳಗದಲ್ಲಿ ಉಳಿಯುತ್ತಾರೆಂದು ಖಚಿತಪಡಿಸಿ. ನೀವು ಗೆದ್ದರೆ, ಸಿಎಸ್ ಕೆ ಗೆಲ್ಲುತ್ತದೆ. ನಾನು ಆಡಲಿ ಅಥವಾ ಅವನು, ರಾಬಿನ್ ಮತ್ತು ರೈನಾ ಒಂದೇ,” ಎಂದು ರೈನಾ ಹೇಳಿದರು.

2021 ರ ಐಪಿಎಲ್ ನಲ್ಲಿ ಉತ್ತಪ್ಪ ನಾಲ್ಕು ಪಂದ್ಯಗಳಲ್ಲಿ 136.90 ಸ್ಟ್ರೈಕ್ ರೇಟ್‌ ನೊಂದಿಗೆ 115 ರನ್‌ ಗಳನ್ನು ಗಳಿಸಿದ್ದರು, ಸಿಎಸ್‌ಕೆ ತಂಡವು ಫೈನಲ್‌ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 27 ರನ್‌ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

andolanait

Recent Posts

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

24 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

46 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

55 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

1 hour ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

1 hour ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

2 hours ago