ಕ್ರೀಡೆ

ಸಿಎಸ್‌ಕೆ ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ

ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ ಹೇಳಿಕೊಂಡಿದ್ದಾರೆ.

2021ರ ಸೀಸನ್ ನಲ್ಲಿ ಸಿಎಸ್ ಕೆ ತಂಡದಲ್ಲಿ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪಗೆ ಅವಕಾಶ ನೀಡಲಾಗಿತ್ತು. ಇದೀಗ ಉತ್ತಪ್ಪ ಜೊತೆಗಿನ ಮಾತುಕತೆ ವೇಳೆ ರೈನಾ ಇದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

‘ನಾನು ಮತ್ತು ಧೋನಿ ಮಾತನಾಡಿದಾಗ, ನೀವು ರಾಬಿನ್ ಉತ್ತಪ್ಪ ಅವರನ್ನು ಆಡಿಸಬಹುದು ಎಂದು ಹೇಳಿದ್ದೆ, ನಿಮ್ಮನ್ನು ಚಾಂಪಿಯನ್ ಮಾಡುವ ವ್ಯಕ್ತಿ ಆತ ಎಂದು ಹೇಳಿದ್ದೆ’ ಎಂದು ರೈನಾ ಮೆಲುಕು ಹಾಕಿದ್ದಾರೆ.

ತನ್ನನ್ನು ಆಡುವ ಬಳಗದಿಂದ ಹೊರಗಿಡುವ ನಿರ್ಧಾರವನ್ನು ಧೋನಿ ಹೇಗೆ ತೆಗೆದುಕೊಂಡರು ಎಂದು ರೈನಾ ಹೇಳಿದರು.

“ಒಮ್ಮೆ ಎಂಎಸ್ ಧೋನಿ ನನ್ನ ಬಳಿ ಬಂದು ‘ನಾವು 2008 ರಿಂದ ಒಟ್ಟಿಗೆ ಆಡಿದ್ದೇವೆ, ಆದರೆ ನಾನು ಈ ಋತುವಿನಲ್ಲಿ ಗೆಲ್ಲಲು ಬಯಸುತ್ತೇನೆ. ಈಗ, ನೀವು ಏನು ಮಾಡಬೇಕೆಂದು ನನಗೆ ಹೇಳಿ’ ಎಂದು ಕೇಳಿದರು. ಅದಕ್ಕೆ ನಾನು ‘ರಾಬಿನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ ಮತ್ತು ಫೈನಲ್ ವರೆಗೆ ಅವರು ಆಡುವ ಬಳಗದಲ್ಲಿ ಉಳಿಯುತ್ತಾರೆಂದು ಖಚಿತಪಡಿಸಿ. ನೀವು ಗೆದ್ದರೆ, ಸಿಎಸ್ ಕೆ ಗೆಲ್ಲುತ್ತದೆ. ನಾನು ಆಡಲಿ ಅಥವಾ ಅವನು, ರಾಬಿನ್ ಮತ್ತು ರೈನಾ ಒಂದೇ,” ಎಂದು ರೈನಾ ಹೇಳಿದರು.

2021 ರ ಐಪಿಎಲ್ ನಲ್ಲಿ ಉತ್ತಪ್ಪ ನಾಲ್ಕು ಪಂದ್ಯಗಳಲ್ಲಿ 136.90 ಸ್ಟ್ರೈಕ್ ರೇಟ್‌ ನೊಂದಿಗೆ 115 ರನ್‌ ಗಳನ್ನು ಗಳಿಸಿದ್ದರು, ಸಿಎಸ್‌ಕೆ ತಂಡವು ಫೈನಲ್‌ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 27 ರನ್‌ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

5 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago