ಕ್ರೀಡೆ

ಸಿಎಸ್‌ಕೆ ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ

ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ ಹೇಳಿಕೊಂಡಿದ್ದಾರೆ.

2021ರ ಸೀಸನ್ ನಲ್ಲಿ ಸಿಎಸ್ ಕೆ ತಂಡದಲ್ಲಿ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪಗೆ ಅವಕಾಶ ನೀಡಲಾಗಿತ್ತು. ಇದೀಗ ಉತ್ತಪ್ಪ ಜೊತೆಗಿನ ಮಾತುಕತೆ ವೇಳೆ ರೈನಾ ಇದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

‘ನಾನು ಮತ್ತು ಧೋನಿ ಮಾತನಾಡಿದಾಗ, ನೀವು ರಾಬಿನ್ ಉತ್ತಪ್ಪ ಅವರನ್ನು ಆಡಿಸಬಹುದು ಎಂದು ಹೇಳಿದ್ದೆ, ನಿಮ್ಮನ್ನು ಚಾಂಪಿಯನ್ ಮಾಡುವ ವ್ಯಕ್ತಿ ಆತ ಎಂದು ಹೇಳಿದ್ದೆ’ ಎಂದು ರೈನಾ ಮೆಲುಕು ಹಾಕಿದ್ದಾರೆ.

ತನ್ನನ್ನು ಆಡುವ ಬಳಗದಿಂದ ಹೊರಗಿಡುವ ನಿರ್ಧಾರವನ್ನು ಧೋನಿ ಹೇಗೆ ತೆಗೆದುಕೊಂಡರು ಎಂದು ರೈನಾ ಹೇಳಿದರು.

“ಒಮ್ಮೆ ಎಂಎಸ್ ಧೋನಿ ನನ್ನ ಬಳಿ ಬಂದು ‘ನಾವು 2008 ರಿಂದ ಒಟ್ಟಿಗೆ ಆಡಿದ್ದೇವೆ, ಆದರೆ ನಾನು ಈ ಋತುವಿನಲ್ಲಿ ಗೆಲ್ಲಲು ಬಯಸುತ್ತೇನೆ. ಈಗ, ನೀವು ಏನು ಮಾಡಬೇಕೆಂದು ನನಗೆ ಹೇಳಿ’ ಎಂದು ಕೇಳಿದರು. ಅದಕ್ಕೆ ನಾನು ‘ರಾಬಿನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ ಮತ್ತು ಫೈನಲ್ ವರೆಗೆ ಅವರು ಆಡುವ ಬಳಗದಲ್ಲಿ ಉಳಿಯುತ್ತಾರೆಂದು ಖಚಿತಪಡಿಸಿ. ನೀವು ಗೆದ್ದರೆ, ಸಿಎಸ್ ಕೆ ಗೆಲ್ಲುತ್ತದೆ. ನಾನು ಆಡಲಿ ಅಥವಾ ಅವನು, ರಾಬಿನ್ ಮತ್ತು ರೈನಾ ಒಂದೇ,” ಎಂದು ರೈನಾ ಹೇಳಿದರು.

2021 ರ ಐಪಿಎಲ್ ನಲ್ಲಿ ಉತ್ತಪ್ಪ ನಾಲ್ಕು ಪಂದ್ಯಗಳಲ್ಲಿ 136.90 ಸ್ಟ್ರೈಕ್ ರೇಟ್‌ ನೊಂದಿಗೆ 115 ರನ್‌ ಗಳನ್ನು ಗಳಿಸಿದ್ದರು, ಸಿಎಸ್‌ಕೆ ತಂಡವು ಫೈನಲ್‌ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 27 ರನ್‌ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

1 hour ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago