ಕ್ರೀಡೆ

ಸಿಎಸ್‌ಕೆ ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ

ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ ಹೇಳಿಕೊಂಡಿದ್ದಾರೆ.

2021ರ ಸೀಸನ್ ನಲ್ಲಿ ಸಿಎಸ್ ಕೆ ತಂಡದಲ್ಲಿ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪಗೆ ಅವಕಾಶ ನೀಡಲಾಗಿತ್ತು. ಇದೀಗ ಉತ್ತಪ್ಪ ಜೊತೆಗಿನ ಮಾತುಕತೆ ವೇಳೆ ರೈನಾ ಇದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

‘ನಾನು ಮತ್ತು ಧೋನಿ ಮಾತನಾಡಿದಾಗ, ನೀವು ರಾಬಿನ್ ಉತ್ತಪ್ಪ ಅವರನ್ನು ಆಡಿಸಬಹುದು ಎಂದು ಹೇಳಿದ್ದೆ, ನಿಮ್ಮನ್ನು ಚಾಂಪಿಯನ್ ಮಾಡುವ ವ್ಯಕ್ತಿ ಆತ ಎಂದು ಹೇಳಿದ್ದೆ’ ಎಂದು ರೈನಾ ಮೆಲುಕು ಹಾಕಿದ್ದಾರೆ.

ತನ್ನನ್ನು ಆಡುವ ಬಳಗದಿಂದ ಹೊರಗಿಡುವ ನಿರ್ಧಾರವನ್ನು ಧೋನಿ ಹೇಗೆ ತೆಗೆದುಕೊಂಡರು ಎಂದು ರೈನಾ ಹೇಳಿದರು.

“ಒಮ್ಮೆ ಎಂಎಸ್ ಧೋನಿ ನನ್ನ ಬಳಿ ಬಂದು ‘ನಾವು 2008 ರಿಂದ ಒಟ್ಟಿಗೆ ಆಡಿದ್ದೇವೆ, ಆದರೆ ನಾನು ಈ ಋತುವಿನಲ್ಲಿ ಗೆಲ್ಲಲು ಬಯಸುತ್ತೇನೆ. ಈಗ, ನೀವು ಏನು ಮಾಡಬೇಕೆಂದು ನನಗೆ ಹೇಳಿ’ ಎಂದು ಕೇಳಿದರು. ಅದಕ್ಕೆ ನಾನು ‘ರಾಬಿನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ ಮತ್ತು ಫೈನಲ್ ವರೆಗೆ ಅವರು ಆಡುವ ಬಳಗದಲ್ಲಿ ಉಳಿಯುತ್ತಾರೆಂದು ಖಚಿತಪಡಿಸಿ. ನೀವು ಗೆದ್ದರೆ, ಸಿಎಸ್ ಕೆ ಗೆಲ್ಲುತ್ತದೆ. ನಾನು ಆಡಲಿ ಅಥವಾ ಅವನು, ರಾಬಿನ್ ಮತ್ತು ರೈನಾ ಒಂದೇ,” ಎಂದು ರೈನಾ ಹೇಳಿದರು.

2021 ರ ಐಪಿಎಲ್ ನಲ್ಲಿ ಉತ್ತಪ್ಪ ನಾಲ್ಕು ಪಂದ್ಯಗಳಲ್ಲಿ 136.90 ಸ್ಟ್ರೈಕ್ ರೇಟ್‌ ನೊಂದಿಗೆ 115 ರನ್‌ ಗಳನ್ನು ಗಳಿಸಿದ್ದರು, ಸಿಎಸ್‌ಕೆ ತಂಡವು ಫೈನಲ್‌ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 27 ರನ್‌ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

andolanait

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

47 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago