ಕ್ರೀಡೆ

ಆ್ಯಮ್ ಸ್ಟರ್ ಡ್ಯಾಮ್ ನಲ್ಲಿ ‘ರೈನಾ’ ರೆಸ್ಟೋರೆಂಟ್!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಯುರೋಪ್‌’ನ ನೆದರ್ಲೆಂಡ್ಸ್‌’ನ ರಾಜಧಾನಿ ಆಮ್‌ಸ್ಟರ್‌ಡ್ಯಾಮ್‌’ನಲ್ಲಿ ನೂತನ ರೆಸ್ಟೋರೆಂಟ್ ತೆರೆದಿದ್ದಾರೆ.

ಹೌದು.. ಈ ವಿಚಾರವನ್ನು ಸ್ವತಃ ಸುರೇಶ್ ರೈನಾ ಅವರೇ ಟ್ವಿಟರ್ ನಲ್ಲಿ ತಿಳಿಸಿದ್ದು,‘ಆಮ್‌ಸ್ಟರ್‌ಡ್ಯಾಮ್‌’ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರಂಟ್ ಪರಿಚಯಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ ಭಾರತೀಯರು ಸೇರಿದಂತೆ ಯುರೋಪ್ ಜನರಿಗೆ ತಲುಪಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಈ ವಿಶೇಷ ಹೊಟೆಲ್ ಗೆ ‘ರೈನಾ ಇಂಡಿಯನ್ ರೆಸ್ಟೋರಂಟ್’ ಎಂದು ಹೆಸರಿಡಲಾಗಿದೆ.

ಉತ್ತರಪ್ರದೇಶ ಮೂಲದ ಸುರೇಶ್ ರೈನಾ ಅವರು 2022 ರಲ್ಲಿ ಎಲ್ಲ ಪ್ರಕಾರದ ಕ್ರಿಕೆಟ್‌’ಗಳಿಗೆ ವಿದಾಯ ಹೇಳಿ ಹೋಟೆಲ್ ಉದ್ಯಮ ಸ್ಥಾಪಿಸಿದ್ದಾರೆ. ಅದರ ಭಾಗವಾಗಿ ಅವರು ನೆದರ್ಲ್ಯಾಂಡ್‌’ನಲ್ಲಿ ಈ ಹೋಟೆಲ್ ತೆರೆದಿದ್ದಾರೆ.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

4 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

4 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

5 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

6 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

6 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

14 hours ago