ಕ್ರೀಡೆ

IPL 2024: ರಾಜಸ್ತಾನ್‌ ಸಂಘಟಿತ ಆಟಕ್ಕೆ ತಲೆಬಾಗಿದ ಮುಂಬೈ

ಮುಂಬೈ: ರಾಜಸ್ತಾನ್‌ ತಂಡ ದಿಟ್ಟ ಬೌಲಿಂಗ್‌ ದಾಳಿ ಮುಂದೆ ಮಂಕಾದ ಮುಂಬೈ ಇಂಡಿಯನ್ಸ್‌ ತಂಡ ತನ್ನ ತವರಿನಂಗಳದಲ್ಲಿಯೇ ಸೋಲಿನ ರುಚಿ ಕಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್‌ ನಡುವಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 125 ರನ್‌ ಕೆಲಹಾಕಿ 126ರನ್‌ ಗುರಿ ನೀಡಿತು. ಇದನ್ನು ಬೆನ್ನತ್ತಿದ ರಾಜಸ್ತಾನ್‌ ಕೇವಲ 15.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 127 ಬಾರಿಸಿ ಗೆಲುವಿನ ನಗೆ ಬೀರಿತು.

ಮುಂಬೈ ಇನ್ನಿಂಗ್ಸ್‌: ಮುಂಬೈ ತಂಡದ ಆರಂಭಿಕ ಆಟಗಾರರು ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದಾಳಿಗೆ ತತ್ತರಿಸಿದರು. ರನ್ ಖಾತೆ ತೆರೆಯುವ ಮುನ್ನವೇ ರೋಹಿತ್ ಶರ್ಮಾ, ನಮನ್ ಧೀರ್, ಡೆವಾಲ್ಡ್ ಬ್ರೆವಿಸ್ ಪೆವಿಲಿಯನ್ ಸೇರಿದರು. ನಾಯಕ ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 6 ಬೌಂಡರಿ ಸಹಿತ 34 ರನ್ ಗಳಿಸಿದರು. ತಿಲಕ್ ವರ್ಮಾ 32, ಟಿಮ್ ಡೇವಿಡ್ 17, ಇಶಾನ್ ಕಿಶನ್ 16 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಶ್ರಮಿಸಿದರು.

ಆರ್‌ಆರ್‌ ಪರ ಟ್ರೆಂಟ್ ಬೌಲ್ಡ್ ಹಾಗೂ ಯಜುವೇಂದ್ರ ಚಾಹಲ್ ತಲಾ ಮೂರು ವಿಕೆಟ್ ಪಡೆದರೆ, ನಾಂದ್ರೆ ಬರ್ಗರ್ 2, ಆವೇಶ್ ಖಾನ್ ಒಂದು ವಿಕೆಟ್ ಕಬಳಿಸಿ ಮಿಂಚಿದರು.

ರಾಜಸ್ತಾನ್‌ ಇನ್ನಿಂಗ್ಸ್‌: ಸಾಧಾರಣ ಮೊತ್ತ ಬೆನ್ನತ್ತಿದ ರಾಜಸ್ತಾನ್‌ ಗೂ ಆರಂಭಿಕ ಆಘಾತ ಉಂಟಾಯಿತು. ಜೈಸ್ವಾಲ್‌ ಕೇವಲ 10 ರನ್‌ ಗಳಿಸಿ ನಿರ್ಗಮಿಸಿದರು. ಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್‌ 12ಕ್ಕೆ ಆಟ ಮುಗಿಸಿದರು. ಬಟ್ಲರ್‌ ಎಂದಿನಿಂತೆ 13 ರನ್‌ ಅಲ್ಪ ಮೊತ್ತ ಕೆಲಹಾಕಿ ಪೆವಿಲಿಯನ್‌ ದಾರಿ ಹಿಡಿದರು.

ಬಳಿಕ ಜೊತೆಯಾದ ಅಶ್ವಿನ್‌ ಹಗೂ ರಿಯಾನ್‌ ಪರಾಗ್‌ ಆಟವನ್ನು ರಾಜಸ್ತಾನ್‌ ನತ್ತ ವಾಲಿಸುವಲ್ಲಿ ಯಶಸ್ವಿಯಾದರು. ಅಶ್ವಿನ್‌ 16 ಗಳಿಸಿದರೇ, ಪರಾಗ್‌ ಕೇವಲ 39 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್‌ ಸಹಿತ 54 ರನ್‌ ಗಳಿಸಿ ತಂಡದ ಗೆಲುವಿಗೆ ಕಾರಣದರಾದರು.

ಮುಂಬೈ ಪರ ಆಕಾಶ್‌ ಮಧ್ವಲ್‌ ಮೂರು, ಮಫಕಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಟ್ರೆಂಟ್‌ ಬೋಲ್ಟ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

10 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

11 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

13 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

14 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

16 hours ago