ಕ್ರೀಡೆ

IPL 2024: ರಾಜಸ್ತಾನ್‌ ಸಂಘಟಿತ ಆಟಕ್ಕೆ ತಲೆಬಾಗಿದ ಮುಂಬೈ

ಮುಂಬೈ: ರಾಜಸ್ತಾನ್‌ ತಂಡ ದಿಟ್ಟ ಬೌಲಿಂಗ್‌ ದಾಳಿ ಮುಂದೆ ಮಂಕಾದ ಮುಂಬೈ ಇಂಡಿಯನ್ಸ್‌ ತಂಡ ತನ್ನ ತವರಿನಂಗಳದಲ್ಲಿಯೇ ಸೋಲಿನ ರುಚಿ ಕಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್‌ ನಡುವಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 125 ರನ್‌ ಕೆಲಹಾಕಿ 126ರನ್‌ ಗುರಿ ನೀಡಿತು. ಇದನ್ನು ಬೆನ್ನತ್ತಿದ ರಾಜಸ್ತಾನ್‌ ಕೇವಲ 15.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 127 ಬಾರಿಸಿ ಗೆಲುವಿನ ನಗೆ ಬೀರಿತು.

ಮುಂಬೈ ಇನ್ನಿಂಗ್ಸ್‌: ಮುಂಬೈ ತಂಡದ ಆರಂಭಿಕ ಆಟಗಾರರು ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದಾಳಿಗೆ ತತ್ತರಿಸಿದರು. ರನ್ ಖಾತೆ ತೆರೆಯುವ ಮುನ್ನವೇ ರೋಹಿತ್ ಶರ್ಮಾ, ನಮನ್ ಧೀರ್, ಡೆವಾಲ್ಡ್ ಬ್ರೆವಿಸ್ ಪೆವಿಲಿಯನ್ ಸೇರಿದರು. ನಾಯಕ ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 6 ಬೌಂಡರಿ ಸಹಿತ 34 ರನ್ ಗಳಿಸಿದರು. ತಿಲಕ್ ವರ್ಮಾ 32, ಟಿಮ್ ಡೇವಿಡ್ 17, ಇಶಾನ್ ಕಿಶನ್ 16 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಶ್ರಮಿಸಿದರು.

ಆರ್‌ಆರ್‌ ಪರ ಟ್ರೆಂಟ್ ಬೌಲ್ಡ್ ಹಾಗೂ ಯಜುವೇಂದ್ರ ಚಾಹಲ್ ತಲಾ ಮೂರು ವಿಕೆಟ್ ಪಡೆದರೆ, ನಾಂದ್ರೆ ಬರ್ಗರ್ 2, ಆವೇಶ್ ಖಾನ್ ಒಂದು ವಿಕೆಟ್ ಕಬಳಿಸಿ ಮಿಂಚಿದರು.

ರಾಜಸ್ತಾನ್‌ ಇನ್ನಿಂಗ್ಸ್‌: ಸಾಧಾರಣ ಮೊತ್ತ ಬೆನ್ನತ್ತಿದ ರಾಜಸ್ತಾನ್‌ ಗೂ ಆರಂಭಿಕ ಆಘಾತ ಉಂಟಾಯಿತು. ಜೈಸ್ವಾಲ್‌ ಕೇವಲ 10 ರನ್‌ ಗಳಿಸಿ ನಿರ್ಗಮಿಸಿದರು. ಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್‌ 12ಕ್ಕೆ ಆಟ ಮುಗಿಸಿದರು. ಬಟ್ಲರ್‌ ಎಂದಿನಿಂತೆ 13 ರನ್‌ ಅಲ್ಪ ಮೊತ್ತ ಕೆಲಹಾಕಿ ಪೆವಿಲಿಯನ್‌ ದಾರಿ ಹಿಡಿದರು.

ಬಳಿಕ ಜೊತೆಯಾದ ಅಶ್ವಿನ್‌ ಹಗೂ ರಿಯಾನ್‌ ಪರಾಗ್‌ ಆಟವನ್ನು ರಾಜಸ್ತಾನ್‌ ನತ್ತ ವಾಲಿಸುವಲ್ಲಿ ಯಶಸ್ವಿಯಾದರು. ಅಶ್ವಿನ್‌ 16 ಗಳಿಸಿದರೇ, ಪರಾಗ್‌ ಕೇವಲ 39 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್‌ ಸಹಿತ 54 ರನ್‌ ಗಳಿಸಿ ತಂಡದ ಗೆಲುವಿಗೆ ಕಾರಣದರಾದರು.

ಮುಂಬೈ ಪರ ಆಕಾಶ್‌ ಮಧ್ವಲ್‌ ಮೂರು, ಮಫಕಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಟ್ರೆಂಟ್‌ ಬೋಲ್ಟ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago