ಕ್ರೀಡೆ

IPL 2024: ಸ್ಯಾಮ್ಸನ್‌-ಬಟ್ಲರ್‌ ಜೊತೆಯಾಟದ ಮುಂದೆ ಮಂಡಿಯೂರಿದ ಆರ್‌ಸಿಬಿ!

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.

ಆರ್‌ಸಿಬಿ ವಿರುದ್ಧ ಗೆಲುವು ದಾಖಲಿಸುವ ಮೂಲಕ ತಾವಾಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಆರ್‌ಆರ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ರಾಯಲ್ಸ್‌ ತಂಡ 19.1 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 189 ರನ್‌ ಗಳಿಸಿ ಗೆದ್ದು ಬೀಗಿದೆ.

ಆರ್‌ಸಿಬಿ ಇನ್ನಿಂಗ್ಸ್‌: ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಕೊಹ್ಲಿ ಔಟಾಗದೆ 72 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್ ಸಹಿತ 113 ರನ್ ಗಳಿಸಿ ಮಿಂಚಿದರೇ, ಫಾಫ್‌ 33 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 44 ರನ್ ಗಳಿಸಿ ಬೃಹತ್‌ ಮೊತ್ತ ಕೆಲಹಾಕುವ ಸೂಚನೆ ನೀಡಿದರು.

ಫಾಫ್‌ ಚಾಹಲ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರೇ, ಬಳಿಕ ಕ್ರೀಸ್‌ಗೆ ಬಂದ ಗ್ರೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಗಳಿಸಿ ಬಂದ ದಾರಿಯಲ್ಲೇ ಹಿಂದಿರುಗಿದರು. ಉಳಿದಂತೆ ಸೌರವ್ ಚೌಹಾಣ್ 6 ರನ್ ಗಳಿಸಿದರೆ, ಕ್ಯಾಮರೂನ್ ಗ್ರೀನ್ ಔಟಾಗದೆ 5 ರನ್ ಗಳಿಸಿದರು.

ರಾಜಸ್ಥಾನದ ಪರ ಯಜುವೇಂದ್ರ ಚಾಹಲ್ 2, ಬರ್ಗರ್ 1 ವಿಕೆಟ್ ಪಡೆದರು.

ರಾಜಸ್ಥಾನ್‌ ಇನ್ನಿಂಗ್ಸ್‌: ತವರಿನಂಗಳದಲ್ಲಿ ಬೃಹತ್‌ ಮೊತ್ತ ಚೇಸ್‌ ಮಾಡಲು ಮುಂದಾದ ಆರ್‌ಆರ್‌ಗೆ ಆರಂಭಿಕ ಆಘಾತ ಉಂಟಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಸೊನ್ನೆ ಸುತ್ತಿ ಟಾಪ್ಲಿಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್‌, ಬಟ್ಲರ್‌ ಜೊತೆಗೂಡಿ ಭರ್ಜರಿ ಇನ್ನಿಂಗ್ಸ್‌ ಕಟ್ಟಿದರು. ನಾಯಕ ಸ್ಯಾಮ್ಸನ್‌ 42 ಎಸೆತ ಎದುರಿಸಿ 8ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 69 ರನ್‌ ಗಳಿಸಿ ಸಿರಾಜ್‌ಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ಪರಾಗ್‌ 4, ಜುರೆಲ್‌ 2 ರನ್‌ ಗಳಿಸಿ ಬೇಗನೇ ಪೆವಿಲಿಯನ್‌ ಸೇರಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಡಿದ ಜಾಸ್‌ ಬಟ್ಲರ್‌ ಆರ್‌ಸಿಬಿಯಿಂದ ಮ್ಯಾಚ್‌ ಕಸಿದರು. ಅವರು ಓಟಾಗದೇ 58 ಎಸೆತಗಳಲ್ಲಿ 9ಬೌಂಡರಿ, 4ಸಿಕ್ಸರ್‌ ಸಹಿತ 100 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರಿಗೆ ಹೆಟ್ಮಾಯರ್‌ 11 ರನ್‌ ಗಳಿಸಿ ಸಾಥ್‌ ನೀಡಿದರು.

ಆರ್‌ಸಿಬಿ ಪರ ಟಾಪ್ಲಿ 2, ಯಶ್‌ ದಯಾಳ್‌ ಮತ್ತು ಸಿರಾಜ್‌ ತಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

2 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

2 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

4 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

4 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

4 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

6 hours ago