ಕ್ರೀಡೆ

IPL 2024: ಸ್ಯಾಮ್ಸನ್‌-ಬಟ್ಲರ್‌ ಜೊತೆಯಾಟದ ಮುಂದೆ ಮಂಡಿಯೂರಿದ ಆರ್‌ಸಿಬಿ!

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ.

ಆರ್‌ಸಿಬಿ ವಿರುದ್ಧ ಗೆಲುವು ದಾಖಲಿಸುವ ಮೂಲಕ ತಾವಾಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಆರ್‌ಆರ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ರಾಯಲ್ಸ್‌ ತಂಡ 19.1 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 189 ರನ್‌ ಗಳಿಸಿ ಗೆದ್ದು ಬೀಗಿದೆ.

ಆರ್‌ಸಿಬಿ ಇನ್ನಿಂಗ್ಸ್‌: ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಕೊಹ್ಲಿ ಔಟಾಗದೆ 72 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್ ಸಹಿತ 113 ರನ್ ಗಳಿಸಿ ಮಿಂಚಿದರೇ, ಫಾಫ್‌ 33 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 44 ರನ್ ಗಳಿಸಿ ಬೃಹತ್‌ ಮೊತ್ತ ಕೆಲಹಾಕುವ ಸೂಚನೆ ನೀಡಿದರು.

ಫಾಫ್‌ ಚಾಹಲ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರೇ, ಬಳಿಕ ಕ್ರೀಸ್‌ಗೆ ಬಂದ ಗ್ರೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಗಳಿಸಿ ಬಂದ ದಾರಿಯಲ್ಲೇ ಹಿಂದಿರುಗಿದರು. ಉಳಿದಂತೆ ಸೌರವ್ ಚೌಹಾಣ್ 6 ರನ್ ಗಳಿಸಿದರೆ, ಕ್ಯಾಮರೂನ್ ಗ್ರೀನ್ ಔಟಾಗದೆ 5 ರನ್ ಗಳಿಸಿದರು.

ರಾಜಸ್ಥಾನದ ಪರ ಯಜುವೇಂದ್ರ ಚಾಹಲ್ 2, ಬರ್ಗರ್ 1 ವಿಕೆಟ್ ಪಡೆದರು.

ರಾಜಸ್ಥಾನ್‌ ಇನ್ನಿಂಗ್ಸ್‌: ತವರಿನಂಗಳದಲ್ಲಿ ಬೃಹತ್‌ ಮೊತ್ತ ಚೇಸ್‌ ಮಾಡಲು ಮುಂದಾದ ಆರ್‌ಆರ್‌ಗೆ ಆರಂಭಿಕ ಆಘಾತ ಉಂಟಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಸೊನ್ನೆ ಸುತ್ತಿ ಟಾಪ್ಲಿಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್‌, ಬಟ್ಲರ್‌ ಜೊತೆಗೂಡಿ ಭರ್ಜರಿ ಇನ್ನಿಂಗ್ಸ್‌ ಕಟ್ಟಿದರು. ನಾಯಕ ಸ್ಯಾಮ್ಸನ್‌ 42 ಎಸೆತ ಎದುರಿಸಿ 8ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 69 ರನ್‌ ಗಳಿಸಿ ಸಿರಾಜ್‌ಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ಪರಾಗ್‌ 4, ಜುರೆಲ್‌ 2 ರನ್‌ ಗಳಿಸಿ ಬೇಗನೇ ಪೆವಿಲಿಯನ್‌ ಸೇರಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ನೆಲಕಚ್ಚಿ ಆಡಿದ ಜಾಸ್‌ ಬಟ್ಲರ್‌ ಆರ್‌ಸಿಬಿಯಿಂದ ಮ್ಯಾಚ್‌ ಕಸಿದರು. ಅವರು ಓಟಾಗದೇ 58 ಎಸೆತಗಳಲ್ಲಿ 9ಬೌಂಡರಿ, 4ಸಿಕ್ಸರ್‌ ಸಹಿತ 100 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರಿಗೆ ಹೆಟ್ಮಾಯರ್‌ 11 ರನ್‌ ಗಳಿಸಿ ಸಾಥ್‌ ನೀಡಿದರು.

ಆರ್‌ಸಿಬಿ ಪರ ಟಾಪ್ಲಿ 2, ಯಶ್‌ ದಯಾಳ್‌ ಮತ್ತು ಸಿರಾಜ್‌ ತಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

39 mins ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

2 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

3 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

3 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

5 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

5 hours ago