ಕ್ರೀಡೆ

IPL 2024: ಬಟ್ಲರ್‌ ಸೆಂಚುರಿ; ಕೆಕೆಆರ್‌ ಮಣಿಸಿ ಅಗ್ರಸ್ಥಾನ ಉಳಿಸಿಕೊಂಡ ಆರ್‌ಆರ್‌

ಕೊಲ್ಕತ್ತಾ: ಜೋಸ್‌ ಬಟ್ಲರ್‌ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಮತ್ತು ಆರ್‌ಆರ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೊಲ್ಕತ್ತಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 223ರನ್‌ ಗಳಿಸಿ 224ರನ್‌ಗಳ ಗುರಿ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ಬಟ್ಲರ್‌ ಶತಕದಾಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8ವಿಕೆಟ್‌ ಕಳೆದುಕೊಂಡು 224 ರನ್‌ ಬಾರಿಸಿ ಗೆದ್ದು ಬೀಗಿತು.

ಕೆಕೆಆರ್‌ ಇನ್ನಿಂಗ್ಸ್‌: ತಮ್ಮ ತವರಿನಂಗಳದಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ತೋರಿದ ಆಲ್‌ರೌಂಡರ್‌ ನರೈನ್‌ ರಾಜಸ್ಥಾನ್‌ ಬೌಲರ್‌ಗಳನ್ನು ಕಾಡಿದರು. 56 ಎಸೆತ ಎದುರಿಸಿದ ಅವರು 13ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 109 ಗಳಿಸಿ ಐಪಿಎಲ್‌ನಲ್ಲಿ ತಮ್ಮ ಮೊದಲ ಶತಕ ಪೂರೈಸಿದರು. ಇವರಿಗೆ ಸಾಥ್‌ ನೀಡಿದ ರಘುವಂಶಿ 18 ಎಸೆತಗಳಲ್ಲಿ 30 ರನ್‌ ಬಾರಿಸಿ ಔಟಾದರು. ಉಳಿದಂತೆ ಸಾಲ್ಟ್‌ 10, ನಾಯಕ ಅಯ್ಯರ್‌ 11, ಎಸೆಲ್‌ 13, ವೆಂಕಟೇಶ್‌ ಅಯ್ಯರ್‌ 8 ರನ್‌ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ರಿಂಕು ಸಿಂಗ್‌ ಕೇವಲ 9 ಎಸೆತಗಳಲ್ಲಿ 20ರನ್‌ ಚಚ್ಚಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ರಾಜಸ್ಥಾನ್‌ ಪರ ಆವೇಶ್‌ ಖಾನ್‌ ಹಾಗೂ ಕಲ್ದೀಪ್‌ ಸೇನ್‌ ತಲಾ ಎರಡು ವಿಕೆಟ್‌ ಪಡೆದರೇ, ಬೋಲ್ಟ್‌ ಹಾಗೂ ಚಾಹಲ್‌ ತಲಾ ಒಂದೊಂದು ವಿಕಟ್‌ ಪಡೆದು ಮಿಂಚಿದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಚೇಸ್‌ ಮಾಡಿದ ಆರ್‌ಆರ್‌ಗೆ ಆರಂಭಿಕ ಆಘಾತ ಎದುರಾಯಿತು. ಜೈಸ್ವಾಲ್‌ ಮತ್ತೊಮ್ಮೆ ಇನ್ನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ಅವರು 19ನರ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಮತ್ತೊಮ್ಮೆ ರಾಜಸ್ಥಾನ್‌ ತಂಡದಲ್ಲಿ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ನಾಯಕ ಸಂಜು 12ರನ್‌, ರಿಯಾನ್‌ ಪರಾಗ್‌ 34ರನ್‌, ಧೃವ್‌ ಜುರೆಲ್‌ 2, ಅಶ್ವಿನ್‌ 8 ಮತ್ತು ಹೆಟ್ಮಯರ್‌ ಶೂನ್ಯಕ್ಕೆ ಔಟಾಗುವ ಮೂಲಕ ಆರ್‌ಆರ್‌ಗೆ ಕಂಟಕವಾದರು.

ಆದರೆ ಆರಂಭದಿಂದಲೇ ನಿಧಾನಗತಿಯಲ್ಲಿ ಆಟ ಮುಂದುವರೆಸಿದ ಆರಂಭಿಕ ದಾಂಡಿಗ ಜೋಸ್‌ ಬಟ್ಲರ್‌ ಶತಕ ದಾಖಲಿಸಿ ತಂಡವನ್ನು ಗೆಲ್ಲಿಸಿದರು. ಹಾಗೂ ಈ ಟೂರ್ನಿಯಲ್ಲಿ ಎರಡನೇ ಶತಕ ದಾಖಲಿಸಿದರು. ಅಜೇಯರಾಗಿ ಉಳಿದ ಬಟ್ಲರ್‌ ತಾವಾಡಿದ 60 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ 107ರನ್‌ ಬಾರಿಸಿದರು ತಂಡವನ್ನು ಗೆಲುವಿನ ದಡ ಸೇರಿಸಿದರು. ಪೋವಲ್‌ 26 ರನ್‌ ಬಾರಿಸಿ ಇವರಿಗೆ ಸಾಥ್‌ ನೀಡಿದರು.

ಕೊಲ್ಕತ್ತಾ ಪರ ಸುನೀಲ್‌ ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಜೋಸ್‌ ಬಟ್ಲರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

8 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

9 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

9 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

9 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

9 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

10 hours ago