ಕ್ರೀಡೆ

IPL 2024: ಬಟ್ಲರ್‌ ಸೆಂಚುರಿ; ಕೆಕೆಆರ್‌ ಮಣಿಸಿ ಅಗ್ರಸ್ಥಾನ ಉಳಿಸಿಕೊಂಡ ಆರ್‌ಆರ್‌

ಕೊಲ್ಕತ್ತಾ: ಜೋಸ್‌ ಬಟ್ಲರ್‌ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಮತ್ತು ಆರ್‌ಆರ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೊಲ್ಕತ್ತಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 223ರನ್‌ ಗಳಿಸಿ 224ರನ್‌ಗಳ ಗುರಿ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ಬಟ್ಲರ್‌ ಶತಕದಾಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8ವಿಕೆಟ್‌ ಕಳೆದುಕೊಂಡು 224 ರನ್‌ ಬಾರಿಸಿ ಗೆದ್ದು ಬೀಗಿತು.

ಕೆಕೆಆರ್‌ ಇನ್ನಿಂಗ್ಸ್‌: ತಮ್ಮ ತವರಿನಂಗಳದಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ತೋರಿದ ಆಲ್‌ರೌಂಡರ್‌ ನರೈನ್‌ ರಾಜಸ್ಥಾನ್‌ ಬೌಲರ್‌ಗಳನ್ನು ಕಾಡಿದರು. 56 ಎಸೆತ ಎದುರಿಸಿದ ಅವರು 13ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 109 ಗಳಿಸಿ ಐಪಿಎಲ್‌ನಲ್ಲಿ ತಮ್ಮ ಮೊದಲ ಶತಕ ಪೂರೈಸಿದರು. ಇವರಿಗೆ ಸಾಥ್‌ ನೀಡಿದ ರಘುವಂಶಿ 18 ಎಸೆತಗಳಲ್ಲಿ 30 ರನ್‌ ಬಾರಿಸಿ ಔಟಾದರು. ಉಳಿದಂತೆ ಸಾಲ್ಟ್‌ 10, ನಾಯಕ ಅಯ್ಯರ್‌ 11, ಎಸೆಲ್‌ 13, ವೆಂಕಟೇಶ್‌ ಅಯ್ಯರ್‌ 8 ರನ್‌ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ರಿಂಕು ಸಿಂಗ್‌ ಕೇವಲ 9 ಎಸೆತಗಳಲ್ಲಿ 20ರನ್‌ ಚಚ್ಚಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ರಾಜಸ್ಥಾನ್‌ ಪರ ಆವೇಶ್‌ ಖಾನ್‌ ಹಾಗೂ ಕಲ್ದೀಪ್‌ ಸೇನ್‌ ತಲಾ ಎರಡು ವಿಕೆಟ್‌ ಪಡೆದರೇ, ಬೋಲ್ಟ್‌ ಹಾಗೂ ಚಾಹಲ್‌ ತಲಾ ಒಂದೊಂದು ವಿಕಟ್‌ ಪಡೆದು ಮಿಂಚಿದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಚೇಸ್‌ ಮಾಡಿದ ಆರ್‌ಆರ್‌ಗೆ ಆರಂಭಿಕ ಆಘಾತ ಎದುರಾಯಿತು. ಜೈಸ್ವಾಲ್‌ ಮತ್ತೊಮ್ಮೆ ಇನ್ನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ಅವರು 19ನರ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಮತ್ತೊಮ್ಮೆ ರಾಜಸ್ಥಾನ್‌ ತಂಡದಲ್ಲಿ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ನಾಯಕ ಸಂಜು 12ರನ್‌, ರಿಯಾನ್‌ ಪರಾಗ್‌ 34ರನ್‌, ಧೃವ್‌ ಜುರೆಲ್‌ 2, ಅಶ್ವಿನ್‌ 8 ಮತ್ತು ಹೆಟ್ಮಯರ್‌ ಶೂನ್ಯಕ್ಕೆ ಔಟಾಗುವ ಮೂಲಕ ಆರ್‌ಆರ್‌ಗೆ ಕಂಟಕವಾದರು.

ಆದರೆ ಆರಂಭದಿಂದಲೇ ನಿಧಾನಗತಿಯಲ್ಲಿ ಆಟ ಮುಂದುವರೆಸಿದ ಆರಂಭಿಕ ದಾಂಡಿಗ ಜೋಸ್‌ ಬಟ್ಲರ್‌ ಶತಕ ದಾಖಲಿಸಿ ತಂಡವನ್ನು ಗೆಲ್ಲಿಸಿದರು. ಹಾಗೂ ಈ ಟೂರ್ನಿಯಲ್ಲಿ ಎರಡನೇ ಶತಕ ದಾಖಲಿಸಿದರು. ಅಜೇಯರಾಗಿ ಉಳಿದ ಬಟ್ಲರ್‌ ತಾವಾಡಿದ 60 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ 107ರನ್‌ ಬಾರಿಸಿದರು ತಂಡವನ್ನು ಗೆಲುವಿನ ದಡ ಸೇರಿಸಿದರು. ಪೋವಲ್‌ 26 ರನ್‌ ಬಾರಿಸಿ ಇವರಿಗೆ ಸಾಥ್‌ ನೀಡಿದರು.

ಕೊಲ್ಕತ್ತಾ ಪರ ಸುನೀಲ್‌ ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಜೋಸ್‌ ಬಟ್ಲರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago