ಕ್ರೀಡೆ

ರ‍್ಯಾಲಿ ಆಫ್‌ ಚಿಕ್ಕಮಗಳೂರು : ಎನ್.ಮಹಶ್ವೇರನ್‌ಗೆ ಗೆಲವು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ 2025ರ ರ‍್ಯಾಲಿ ಆಫ್ ಚಿಕ್ಕಮಗಳೂರು INTSDRC-1ರಲ್ಲಿ ಎನ್‌.ಮಹೇಶ್ವರನ್ ಮತ್ತು ಸಹ-ಚಾಲಕ ಪ್ರಕಾಶ್ ಮುತ್ತುಸಾಮಿ ಅವರು ಅಸಾಧಾರಣ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು.

ಫೆಡರೇಷನ್ ಆಫ್ ಮೋಟಾರ್ ಸ್ಪೋರ್ಟ್ ಕ್ಲಬ್ಸ್ ಆಫ್ ಇಂಡಿಯಾ (FMSCI) ಆಯೋಜಿಸಿದ ಭಾರತೀಯ ನ್ಯಾಷನಲ್ ಟೈಮ್ ಸ್ಪೀಡ್ ಡಿಸ್ಟನ್ಸ್ ರ‍್ಯಾಲಿ ಚಾಂಪಿಯನ್‌ಶಿಪ್ (4W) 2025ರ ಮೊದಲ ಅರ್ಹತಾ ಸುತ್ತಾಗಿ ಈ ರ್ಯಾಲಿ ನಡೆಯಿತು. ಒಟ್ಟು ಎಂಟು ವಿಭಾಗಗಳಲ್ಲಿ 130ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ ಈ ಸುತ್ತು, ಚಾಂಪಿಯನ್‌ಶಿಪ್ ಇತಿಹಾಸದಲ್ಲೇ ಗರಿಷ್ಠ ಭಾಗವಹಿಸುವಿಕೆಯನ್ನು ದಾಖಲಿಸಿದೆ.

ಇತರ ವಿಭಾಗಗಳ ವಿಜೇತರಲ್ಲಿ ಎ.ವಿನೋದ್ (INTSDRC-2), ಅಪರ್ಣಾ ಪಠಕ್ (ಮಹಿಳಾ ಮತ್ತು ಕರ್ನಾಟಕ ರಾಜ್ಯ ವಿಭಾಗಗಳು), ವಿನಯ್ ಪ್ರಸನ್ನ (ಪ್ರೋ ಸ್ಟಾಕ್), ಭವಾನಿ ಬಾಲಕೃಷ್ಣನ್ (ಕಪಲ್ ಮತ್ತು ಸೂಪರ್ ಕಾರ್ ವಿಭಾಗಗಳು) ಸೇರಿದ್ದರು.

INTSDRC-1 ವಿಭಾಗದಲ್ಲಿ, ಮಹೇಶ್ವರನ್ ಎನ್ ಮತ್ತು ಪ್ರಕಾಶ್ ಮುತ್ತುಸ್ವಾಮಿ ಪ್ರಥಮ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿದ್ದ ತಂಡಕ್ಕಿಂತ ಸುಮಾರು ಒಂದು ನಿಮಿಷ ಮುನ್ನಡೆಯಿದ್ದರು. ಸಂತೋಷ್ ಕುಮಾರ್ ವಿ ಮತ್ತು ಟಿ. ನಾಗರಾಜನ್ ಎರಡನೇ ಸ್ಥಾನದಲ್ಲಿದ್ದು, ಗಣೇಶ್ ಮೂರ್ತಿ ಮತ್ತು ಚಂದ್ರಶೇಖರ್ ಮೂರನೇ ಸ್ಥಾನ ಪಡೆದರು.

INTSDRC-2 ವಿಭಾಗದಲ್ಲಿ, ಎ.ವಿನೋದ್ ಮತ್ತು ಎನ್.ಮುರುಗನ್ ಮೊದಲ ಸ್ಥಾನ ಪಡೆದರೆ, ಮಂಜು ಜೈನ್ ಮತ್ತು ಡಿಂಕಿ ವರ್ಗೀಸ್ ಎರಡನೇ ಸ್ಥಾನ ಹಾಗೂ ರಾಹೀಲ್ ಅಹ್ಮದ್ ಮತ್ತು ಸಕಾಯನ ಕುಮಾರ್ ಮೂರನೇ ಸ್ಥಾನ ಪಡೆದುಕೊಂಡರು.
ಮಹಿಳಾ ವಿಭಾಗದಲ್ಲಿ, ಅಪರ್ಣಾ ಪಠಕ್ ಮತ್ತು ಲಲಿತಾ ಗೌಡ ತಂಡ ಒಂದು ಗಂಟೆಗೂ ಹೆಚ್ಚು ಮುನ್ನಡೆಯೊಂದಿಗೆ ಗೆಲುವು ಸಾಧಿಸಿತು. ಕ್ಷಮತಾ ಮತ್ತು ಅಮ್ಮೋಲ್ ತಂಡ ಎರಡನೇ ಸ್ಥಾನ ಪಡೆದರೆ, ವನ್ಹ್ರೀ ಪಠಕ್ ಮತ್ತು ರಾಮುಚಂದ್ರ ಮೂರನೇ ಸ್ಥಾನ ಪಡೆದರು.

ಪ್ರೋ ಸ್ಟಾಕ್ ವಿಭಾಗದಲ್ಲಿ, ವಿನಯ್ ಪ್ರಸನ್ನ ಮತ್ತು ಆದಿ ಆಂಥನಿ ಮೊದಲ ಸ್ಥಾನದಲ್ಲಿದ್ದರು. ಡಿ ಕೀರ್ತಿ ಪ್ರಸಾದ್ ಮತ್ತು ಸಿ ಸಖ್ತಿವೇಲ್ ಎರಡನೇ ಸ್ಥಾನ, ವಿನಯ್ ಕುಮಾರ್ ಎಂ ಮತ್ತು ವೈ ಅರುಣ್ ಮೂರನೇ ಸ್ಥಾನ ಪಡೆದರು.
ಕಪಲ್ ವಿಭಾಗದಲ್ಲಿ, ಭವಾನಿ ಬಾಲಕೃಷ್ಣನ್ ಮತ್ತು ಆನಂದರಾಜ್ ಎಸ್ 6 ನಿಮಿಷಗಳ ಮುನ್ನಡೆಯೊಂದಿಗೆ ಜಯ ಸಾಧಿಸಿದರು. ಶ್ರುತಾ ಜಯಂತ್ ಮತ್ತು ಜಯಂತ್ ಎಂ ಜೈನ್ ಎರಡನೇ ಸ್ಥಾನ, ರಾವಮಿ ಮಾಬೆಲ್ ಮತ್ತು ವಿನೋತ್ ಕುಮಾರ್ ಮೂರನೇ ಸ್ಥಾನ ಪಡೆದರು.

ಸೂಪರ್ ಕಾರ್ ವಿಭಾಗದಲ್ಲೂ, ಭವಾನಿ ಬಾಲಕೃಷ್ಣನ್ ಮತ್ತು ಆನಂದರಾಜ್ ಎಸ್ ಮೊದಲ ಸ್ಥಾನ ಪಡೆದರೆ, ಕರ್ನಾಟಕ ರಾಜ್ಯ ವಿಭಾಗದಲ್ಲಿ ಅಪರ್ಣಾ ಪಠಕ್ ಮತ್ತು ಲಲಿತಾ ಗೌಡ ಮೊದಲ ಸ್ಥಾನ ಪಡೆದರು. ನಾನ್ಲು ಜಾನ್ ಮತ್ತು ಡಿಂಕಿ ವರ್ಗೀಸ್ ದ್ವಿತೀಯ ಸ್ಥಾನ ಹಾಗೂ ರಾಹೀಲ್ ಅಹ್ಮದ್ ಮತ್ತು ಸರವಣ ಕುಮಾರ್ ತೃತೀಯ ಸ್ಥಾನದಲ್ಲಿ ಸ್ಪರ್ಧೆಯನ್ನು ಮುಗಿಸಿದರು.
ಚಿಕ್ಕಮಗಳೂರಿನ ಮೋಟಾರ್ ಸ್ಪೋರ್ಟ್ಸ್ ಕ್ಲಬ್ (MSCC) ಆಯೋಜಿಸಿದ್ದ ಈ ಇವೆಂಟ್‌ನ್ನು ಜೆಕೆ ಟೈರ್ ಮೋಟಾರ್ ಸ್ಪೋರ್ಟ್ಸ್ ಸಹಯೋಗದಲ್ಲಿ ಹಾಗೂ ವಾಮ್ಸಿ ಮೆರ್ಲಾ ಸ್ಪೋರ್ಟ್ಸ್ ಫೌಂಡೇಶನ್ ಸಹ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸೌತ್‌ ಝೋನ್‌ನ ರೌಂಡ್ 1 ತಜ್ಞರು ಹಾಗೂ ಹೊಸ ಪ್ರತಿಭೆಗಳನ್ನು ಒಟ್ಟುಗೂಡಿಸಿ, ಸುಂದರ ಆದರೆ ತಾಂತ್ರಿಕವಾಗಿ ಸವಾಲುಗಳಿರುವ ಚಿಕ್ಕಮಗಳೂರಿನ ಹಾದಿಗಳನ್ನು ನವೀನ ಧೈರ್ಯದಿಂದ ನವಿರಾಗಿ ನಿರ್ವಹಿಸಲು ಪೂರಕವಾಗಿದೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago