ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಅಯೋಧ್ಯೆಯ ರಾಮಮಂದಿರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶನಿವಾರ ಆಹ್ವಾನ ನೀಡಲಾಗಿದೆ.
ನೀರಜ್ ಚೋಪ್ರಾ, ಪಿಪಿ ಸಿಂಧು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಇತರ ಖ್ಯಾತ ಕ್ರೀಡಾಪಟುಗಳು ಸೇರಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಾದ ಜಖಿ ಶ್ರಾಫ್, ರಜನಿಕಾಂತ್, ರಣಬೀರ್ ಕಪೂರ್ ಮತ್ತಿತರರಿಗೂ ಆಹ್ವಾನ ನೀಡಲಾಗಿದೆ.
ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಕೇವಲ 9 ದಿನಗಳು ಉಳಿದಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ವಿಶೇಷ ಅತಿಥಿಗಳಿಗೆ ಉಡುಗೊರೆಗಳನ್ನು ಒಳಗೊಂಡಂತೆ ಅವರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಟ್ರಸ್ಟ್ ಮಾಡುತ್ತಿದೆ. ವಿಶೇಷ ಅತಿಥಿಗಳಿಗೆ ನೀಡಲಾಗುವ ಉಡುಗೊರೆಗಳು ರಾಮ್ರಾಜ್ ವಸ್ತ್ರವನ್ನು ಒಳಗೊಂಡಿದೆ. ಅಲ್ಲದೇ ಕಾರ್ಯಕ್ರಮದ ಅಂಗವಾಗಿ ಸಮಾರಂಭದ ದಿನದಂದು ಅತಿಥಿಗಳಿಗೆ ವಿಶೇಷವಾಗಿ ತಯಾರಿಸಲಾಗುವ ಮೋತಿಚೂರು ಲಡ್ಡನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ.
ಜನವರಿ 22ರಂದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನೇತೃತ್ವ ವಹಿಸಲಿದ್ದಾರೆ ಮತ್ತು ಜಟಾಯು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.





