ಕ್ರೀಡೆ

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭ: ಮಾಸ್ಟರ್‌ ಬ್ಲಾಸ್ಟರ್‌ಗೆ ಆಹ್ವಾನ

ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್ ತೆಂಡೂಲ್ಕರ್ ಅವರಿಗೆ ಅಯೋಧ್ಯೆಯ ರಾಮಮಂದಿರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶನಿವಾರ ಆಹ್ವಾನ ನೀಡಲಾಗಿದೆ.

ನೀರಜ್ ಚೋಪ್ರಾ, ಪಿಪಿ ಸಿಂಧು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಇತರ ಖ್ಯಾತ ಕ್ರೀಡಾಪಟುಗಳು ಸೇರಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಾದ ಜಖಿ ಶ್ರಾಫ್, ರಜನಿಕಾಂತ್, ರಣಬೀರ್ ಕಪೂರ್ ಮತ್ತಿತರರಿಗೂ ಆಹ್ವಾನ ನೀಡಲಾಗಿದೆ.

ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಕೇವಲ 9 ದಿನಗಳು ಉಳಿದಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ವಿಶೇಷ ಅತಿಥಿಗಳಿಗೆ ಉಡುಗೊರೆಗಳನ್ನು ಒಳಗೊಂಡಂತೆ ಅವರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಟ್ರಸ್ಟ್ ಮಾಡುತ್ತಿದೆ. ವಿಶೇಷ ಅತಿಥಿಗಳಿಗೆ ನೀಡಲಾಗುವ ಉಡುಗೊರೆಗಳು ರಾಮ್‌ರಾಜ್ ವಸ್ತ್ರವನ್ನು ಒಳಗೊಂಡಿದೆ. ಅಲ್ಲದೇ ಕಾರ್ಯಕ್ರಮದ ಅಂಗವಾಗಿ ಸಮಾರಂಭದ ದಿನದಂದು ಅತಿಥಿಗಳಿಗೆ ವಿಶೇಷವಾಗಿ ತಯಾರಿಸಲಾಗುವ ಮೋತಿಚೂರು ಲಡ್ಡನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ.

ಜನವರಿ 22ರಂದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನೇತೃತ್ವ ವಹಿಸಲಿದ್ದಾರೆ ಮತ್ತು ಜಟಾಯು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

21 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

21 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

21 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

21 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

21 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

21 hours ago