ಕ್ರೀಡೆ

ರಣಜಿ ಟ್ರೋಫಿ 2025: ಪಂಜಾಬ್‌ ವಿರುದ್ಧ ಗೆದ್ದು ಬೀಗಿದ ಕರ್ನಾಟಕ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಇದಕ್ಕೆ ತಕ್ಕಂತೆ ಬೌಲಿಂಗ್‌ ಮಾಡಿದ ಬೌಲರ್‌ಗಳು ಪಂಜಾಬ್‌ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್‌ ಮಾಡಿದರು. ತಂಡದ ಪರ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದರೆ, ಅಭಿಲಾಷ್‌ ಶೆಟ್ಟಿ 3 ವಿಕೆಟ್‌ ಪಡೆದರು.

ಇದರ ಬೆನ್ನಲ್ಲೇ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಕರ್ನಾಟಕ ತಂಡ ಸ್ಮರಣ್‌ ರವಿಚಂದ್ರನ್‌ ಚೊಚ್ಚಲ ದ್ವಿಶತಕದ 203(277) ನೆರವಿನಿಂದ 475 ರನ್‌ಗಳ ಬೃಹತ್‌ ಮೊತ್ತ ಪೇರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 320 ರನ್‌ಗಳ ಮುನ್ನಡೆ ಗಳಿಸಿತು.

ಇದಕ್ಕುತ್ತರವಾಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್‌ ತಂಡ ನಾಯಕ ಶುಭಮನ್‌ ಗಿಲ್‌ 102(171) ಶತಕದ ಹೋರಾಟದ ನಡುವೆ 63.4 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಸೋಲನ್ನು ಕಂಡಿತು.

ಕರ್ನಾಟಕದ ಪರ ಯಶೋವರ್ಧನ್‌ ಹಾಗೂ ಶ್ರೇಯಸ್‌ ಗೋಪಾಲ್‌ ತಲಾ 3 ವಿಕೆಟ್‌ ಪಡೆದರೆ, ಪ್ರಸಿದ್ಧ ಕೃಷ್ಣ 2 ವಿಕೆಟ್‌ಗಳಿಸಿ ಮಿಂಚಿದರು.

ಈ ಗೆಲುವಿನೊಂದಿಗೆ ಎಲೈಟ್‌ ʼಸಿʼ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಕರ್ನಾಟಕ ತಂಡ 19 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

5 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

7 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

7 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

7 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago