ಕ್ರೀಡೆ

ರಣಜಿ ಟ್ರೋಫಿ 2025: ಪಂಜಾಬ್‌ ವಿರುದ್ಧ ಗೆದ್ದು ಬೀಗಿದ ಕರ್ನಾಟಕ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಇದಕ್ಕೆ ತಕ್ಕಂತೆ ಬೌಲಿಂಗ್‌ ಮಾಡಿದ ಬೌಲರ್‌ಗಳು ಪಂಜಾಬ್‌ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್‌ ಮಾಡಿದರು. ತಂಡದ ಪರ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದರೆ, ಅಭಿಲಾಷ್‌ ಶೆಟ್ಟಿ 3 ವಿಕೆಟ್‌ ಪಡೆದರು.

ಇದರ ಬೆನ್ನಲ್ಲೇ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಕರ್ನಾಟಕ ತಂಡ ಸ್ಮರಣ್‌ ರವಿಚಂದ್ರನ್‌ ಚೊಚ್ಚಲ ದ್ವಿಶತಕದ 203(277) ನೆರವಿನಿಂದ 475 ರನ್‌ಗಳ ಬೃಹತ್‌ ಮೊತ್ತ ಪೇರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 320 ರನ್‌ಗಳ ಮುನ್ನಡೆ ಗಳಿಸಿತು.

ಇದಕ್ಕುತ್ತರವಾಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್‌ ತಂಡ ನಾಯಕ ಶುಭಮನ್‌ ಗಿಲ್‌ 102(171) ಶತಕದ ಹೋರಾಟದ ನಡುವೆ 63.4 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಸೋಲನ್ನು ಕಂಡಿತು.

ಕರ್ನಾಟಕದ ಪರ ಯಶೋವರ್ಧನ್‌ ಹಾಗೂ ಶ್ರೇಯಸ್‌ ಗೋಪಾಲ್‌ ತಲಾ 3 ವಿಕೆಟ್‌ ಪಡೆದರೆ, ಪ್ರಸಿದ್ಧ ಕೃಷ್ಣ 2 ವಿಕೆಟ್‌ಗಳಿಸಿ ಮಿಂಚಿದರು.

ಈ ಗೆಲುವಿನೊಂದಿಗೆ ಎಲೈಟ್‌ ʼಸಿʼ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಕರ್ನಾಟಕ ತಂಡ 19 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago