ಕ್ರೀಡೆ

ರಣಜಿ ಟ್ರೋಫಿ 2025: ಪಂಜಾಬ್‌ ವಿರುದ್ಧ ಗೆದ್ದು ಬೀಗಿದ ಕರ್ನಾಟಕ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಇದಕ್ಕೆ ತಕ್ಕಂತೆ ಬೌಲಿಂಗ್‌ ಮಾಡಿದ ಬೌಲರ್‌ಗಳು ಪಂಜಾಬ್‌ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್‌ ಮಾಡಿದರು. ತಂಡದ ಪರ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದರೆ, ಅಭಿಲಾಷ್‌ ಶೆಟ್ಟಿ 3 ವಿಕೆಟ್‌ ಪಡೆದರು.

ಇದರ ಬೆನ್ನಲ್ಲೇ ಪ್ರಥಮ ಇನ್ನಿಂಗ್ಸ್‌ ಆರಂಭಿಸಿದ ಕರ್ನಾಟಕ ತಂಡ ಸ್ಮರಣ್‌ ರವಿಚಂದ್ರನ್‌ ಚೊಚ್ಚಲ ದ್ವಿಶತಕದ 203(277) ನೆರವಿನಿಂದ 475 ರನ್‌ಗಳ ಬೃಹತ್‌ ಮೊತ್ತ ಪೇರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 320 ರನ್‌ಗಳ ಮುನ್ನಡೆ ಗಳಿಸಿತು.

ಇದಕ್ಕುತ್ತರವಾಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್‌ ತಂಡ ನಾಯಕ ಶುಭಮನ್‌ ಗಿಲ್‌ 102(171) ಶತಕದ ಹೋರಾಟದ ನಡುವೆ 63.4 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಸೋಲನ್ನು ಕಂಡಿತು.

ಕರ್ನಾಟಕದ ಪರ ಯಶೋವರ್ಧನ್‌ ಹಾಗೂ ಶ್ರೇಯಸ್‌ ಗೋಪಾಲ್‌ ತಲಾ 3 ವಿಕೆಟ್‌ ಪಡೆದರೆ, ಪ್ರಸಿದ್ಧ ಕೃಷ್ಣ 2 ವಿಕೆಟ್‌ಗಳಿಸಿ ಮಿಂಚಿದರು.

ಈ ಗೆಲುವಿನೊಂದಿಗೆ ಎಲೈಟ್‌ ʼಸಿʼ ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಕರ್ನಾಟಕ ತಂಡ 19 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

4 hours ago