ಕ್ರೀಡೆ

ರಣಜಿ ಟ್ರೋಫಿ: 3ನೇ ಬಾರಿ ಚಾಂಪಿಯನ್‌ ಆದ ವಿದರ್ಭ

ನಾಗ್ಪುರ: ದೇಶೀಯ ಕ್ರಿಕೆಟ್‌ ರಣಜಿ ಟ್ರೋಫಿಯಲ್ಲಿ ವಿದರ್ಭ ಸತತ ಮೂರನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ನಾಗ್ಪುರ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಕೇರಳ ಮತ್ತು ವಿದರ್ಭ ನಡುವಣ ಫೈನಲ್ಸ್‌ ಪಂದ್ಯದಲ್ಲಿ ಡ್ರಾ ಸಾಧಸಿದರೂ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಕಾರಣ ವಿದರ್ಭ ಚಾಂಪಿಯನ್‌ ಆಗಿದೆ.

ರಣಜಿ ಕ್ರಿಕೆಟ್‌ನಲ್ಲಿ ಇದೆ ಮೊದಲ ಬಾರಿಗೆ ಫೈನಲ್ಸ್‌ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಕೇರಳದ ಕನಸು ನುಚ್ಚುನೂರಾಗಿದೆ.

ಟಾಸ್‌ ಗೆದ್ದ ಕೇರಳ ತಂಡ ಬೌಲಿಂಗ್‌ ಆಯ್ಕೆ ಮಾಡಿ, ವಿರೋಧ ತಂಡ ವಿದರ್ಭವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ವಿದರ್ಭ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 379 ರನ್‌ ಕಲೆಹಾಕಿ ಸರ್ವಪತನ ಕಂಡಿತ್ತು. ನಂತರ ಕೇರಳ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 342 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 37 ರನ್‌ ಹಿನ್ನಡೆ ಅನುಭವಿಸಿತ್ತು.

ವಿದರ್ಭ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 375 ರನ್‌ ಗಳಿಸಿತು. ಈ ಸಂದರ್ಭದಲ್ಲಿ ಫಲಿತಾಂಶ ದೊರಕದ ಹಿನ್ನಲೆಯಲ್ಲಿ ಡ್ರಾ ಎಂದು ಘೋಷಣೆ ಮಾಡಿದರು. ಈ ವೇಳೆ ಮೊದಲ ಇನ್ನಿಂಗ್ಸ್‌ ಮುನ್ನಡೆ ಕಾಯ್ದುಕೊಂಡ ವಿದರ್ಭವನ್ನು ಚಾಂಪಿಯನ್‌ ಎಂದು ಘೋಷಿಸಲಾಯಿತು. ಇದರೊಂದಿಗೆ ಚೊಚ್ಚಲ ಟ್ರೋಫಿ ಕನಸು ಕಂಡಿದ್ದ ಕೇರಳಕ್ಕೆ ನಿರಾಸೆ ಉಂಟಾಯಿತು.

ಈ ಹಿಂದೆ ವಿದರ್ಭ ತಂಡ 2017-18 ಮತ್ತು 2018-19 ರಲ್ಲಿ ರಣಜಿ ಟ್ರೋಫಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

AddThis Website Tools
ಆಂದೋಲನ ಡೆಸ್ಕ್

Recent Posts

ಪೋಕ್ಸೋ ಕೇಸ್‌| ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್‌ ರಿಲೀಫ್‌: ‌ಸೆಷನ್ಸ್‌ ಕೋರ್ಟ್‌ ಸಮನ್ಸ್‌ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ಕೋರ್ಟ್‌ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ…

28 mins ago

ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ವಿಚಾರ: ಮೈಸೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ…

40 mins ago

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…

55 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ತಪ್ಪೊಪ್ಪಿಕೊಂಡ ನಟಿ ರನ್ಯಾ ರಾವ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್‌ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…

1 hour ago

ಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆ

ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…

1 hour ago

ಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್‌…

1 hour ago