ಕ್ರೀಡೆ

ರಣಜಿ ಟ್ರೋಫಿ: 3ನೇ ಬಾರಿ ಚಾಂಪಿಯನ್‌ ಆದ ವಿದರ್ಭ

ನಾಗ್ಪುರ: ದೇಶೀಯ ಕ್ರಿಕೆಟ್‌ ರಣಜಿ ಟ್ರೋಫಿಯಲ್ಲಿ ವಿದರ್ಭ ಸತತ ಮೂರನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ನಾಗ್ಪುರ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಕೇರಳ ಮತ್ತು ವಿದರ್ಭ ನಡುವಣ ಫೈನಲ್ಸ್‌ ಪಂದ್ಯದಲ್ಲಿ ಡ್ರಾ ಸಾಧಸಿದರೂ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಕಾರಣ ವಿದರ್ಭ ಚಾಂಪಿಯನ್‌ ಆಗಿದೆ.

ರಣಜಿ ಕ್ರಿಕೆಟ್‌ನಲ್ಲಿ ಇದೆ ಮೊದಲ ಬಾರಿಗೆ ಫೈನಲ್ಸ್‌ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಕೇರಳದ ಕನಸು ನುಚ್ಚುನೂರಾಗಿದೆ.

ಟಾಸ್‌ ಗೆದ್ದ ಕೇರಳ ತಂಡ ಬೌಲಿಂಗ್‌ ಆಯ್ಕೆ ಮಾಡಿ, ವಿರೋಧ ತಂಡ ವಿದರ್ಭವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ವಿದರ್ಭ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 379 ರನ್‌ ಕಲೆಹಾಕಿ ಸರ್ವಪತನ ಕಂಡಿತ್ತು. ನಂತರ ಕೇರಳ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 342 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 37 ರನ್‌ ಹಿನ್ನಡೆ ಅನುಭವಿಸಿತ್ತು.

ವಿದರ್ಭ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 375 ರನ್‌ ಗಳಿಸಿತು. ಈ ಸಂದರ್ಭದಲ್ಲಿ ಫಲಿತಾಂಶ ದೊರಕದ ಹಿನ್ನಲೆಯಲ್ಲಿ ಡ್ರಾ ಎಂದು ಘೋಷಣೆ ಮಾಡಿದರು. ಈ ವೇಳೆ ಮೊದಲ ಇನ್ನಿಂಗ್ಸ್‌ ಮುನ್ನಡೆ ಕಾಯ್ದುಕೊಂಡ ವಿದರ್ಭವನ್ನು ಚಾಂಪಿಯನ್‌ ಎಂದು ಘೋಷಿಸಲಾಯಿತು. ಇದರೊಂದಿಗೆ ಚೊಚ್ಚಲ ಟ್ರೋಫಿ ಕನಸು ಕಂಡಿದ್ದ ಕೇರಳಕ್ಕೆ ನಿರಾಸೆ ಉಂಟಾಯಿತು.

ಈ ಹಿಂದೆ ವಿದರ್ಭ ತಂಡ 2017-18 ಮತ್ತು 2018-19 ರಲ್ಲಿ ರಣಜಿ ಟ್ರೋಫಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

3 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

3 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

3 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

3 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

3 hours ago