ಕ್ರೀಡೆ

ರಣಜಿ: ಛತ್ತೀಸಗಢದ ವಿರುದ್ಧ ಕರ್ನಾಟಕಕ್ಕೆ ಜಯ

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ.

ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ ಕೊನೆಯ ದಿನವಾದ ಶುಕ್ರವಾರ ಎರಡನೇ ಇನಿಂಗ್ಸ್‌ನಲ್ಲಿ 77.5 ಓವರ್‌ಗಳಲ್ಲಿ 177 ರನ್ ಗಳಿಸಿ ಆಲೌಟ್‌ ಆಯಿತು.  ಮೊದಲ ಇನಿಂಗ್ಸ್‌ನಲ್ಲಿ 55 ರನ್‌ಗಳ ಅಲ್ಪಮುನ್ನಡೆ ಸಾಧಿಸಿದ್ದ ಕರ್ನಾಟಕ ತಂಡವು ಮೂರು ವಿಕೆಟ್‌ ಕಳೆದುಕೊಂಡು 128 ರನ್‌ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಎರಡನೇ ಇನ್ನಿಂಗ್ಸ್‌ ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಆರ್.‌ ರವಿಕುಮಾರ್‌  ೨೪ ರನ್‌ ಗಳಿಸಿ ರನ್‌ ಔಟ್‌ ಬಲೆಗೆ ಬಿದ್ದರು. ಕಳೆದ ಪಂದ್ಯದ ಶತಕವೀರ ಮಾಯಾಂಕ್‌ ಅಗರವಾಲ್‌ 14 ರನ್‌  ಗಳಿಸಿ ಔಟಾದರು. ಆದರೆ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ನಿಕಿನ್‌ ಜೋಶ್‌  ಬಿರುಸಿನ ಅಜೇಯ 44   ರನ್‌ ಗಳಿಸಿ ಗೆಲುವನ್ನು ಖಾತರಿ ಪಡಿಸಿದರು.  ಮನೀಶ್‌ ಪಾಂಡೆ  24 ಬಾಲ್‌ ಗಳಿಗೆ  27 ರನ್‌ ಗಳಿಸಿ ಕ್ಯಾಚಿತ್ತು ಆಟವಾಡಿದರು. ಕೃಷ್ಣಪ್ಪ ಗೌತಮ್‌ ಎರಡು ರನ್‌ ಬಾರಿಸಿ ಗೆಲುವಿನ ಪಾಲದಾರರಾದರು.

ಶುಕ್ರವಾರ ಬೆಳಗ್ಗಿನ ಅವಧಿಯಲ್ಲಿ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.

ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್‌ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.

ಕರ್ನಾಟಕದ ಆಫ್‌ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.

lokesh

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

57 mins ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

1 hour ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

2 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago