ಕ್ರೀಡೆ

ರಣಜಿ: ಛತ್ತೀಸಗಢದ ವಿರುದ್ಧ ಕರ್ನಾಟಕಕ್ಕೆ ಜಯ

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ.

ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ ಕೊನೆಯ ದಿನವಾದ ಶುಕ್ರವಾರ ಎರಡನೇ ಇನಿಂಗ್ಸ್‌ನಲ್ಲಿ 77.5 ಓವರ್‌ಗಳಲ್ಲಿ 177 ರನ್ ಗಳಿಸಿ ಆಲೌಟ್‌ ಆಯಿತು.  ಮೊದಲ ಇನಿಂಗ್ಸ್‌ನಲ್ಲಿ 55 ರನ್‌ಗಳ ಅಲ್ಪಮುನ್ನಡೆ ಸಾಧಿಸಿದ್ದ ಕರ್ನಾಟಕ ತಂಡವು ಮೂರು ವಿಕೆಟ್‌ ಕಳೆದುಕೊಂಡು 128 ರನ್‌ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಎರಡನೇ ಇನ್ನಿಂಗ್ಸ್‌ ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಆರ್.‌ ರವಿಕುಮಾರ್‌  ೨೪ ರನ್‌ ಗಳಿಸಿ ರನ್‌ ಔಟ್‌ ಬಲೆಗೆ ಬಿದ್ದರು. ಕಳೆದ ಪಂದ್ಯದ ಶತಕವೀರ ಮಾಯಾಂಕ್‌ ಅಗರವಾಲ್‌ 14 ರನ್‌  ಗಳಿಸಿ ಔಟಾದರು. ಆದರೆ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ನಿಕಿನ್‌ ಜೋಶ್‌  ಬಿರುಸಿನ ಅಜೇಯ 44   ರನ್‌ ಗಳಿಸಿ ಗೆಲುವನ್ನು ಖಾತರಿ ಪಡಿಸಿದರು.  ಮನೀಶ್‌ ಪಾಂಡೆ  24 ಬಾಲ್‌ ಗಳಿಗೆ  27 ರನ್‌ ಗಳಿಸಿ ಕ್ಯಾಚಿತ್ತು ಆಟವಾಡಿದರು. ಕೃಷ್ಣಪ್ಪ ಗೌತಮ್‌ ಎರಡು ರನ್‌ ಬಾರಿಸಿ ಗೆಲುವಿನ ಪಾಲದಾರರಾದರು.

ಶುಕ್ರವಾರ ಬೆಳಗ್ಗಿನ ಅವಧಿಯಲ್ಲಿ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.

ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್‌ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.

ಕರ್ನಾಟಕದ ಆಫ್‌ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago