ಕ್ರೀಡೆ

ರಣಜಿ: ಛತ್ತೀಸಗಢದ ವಿರುದ್ಧ ಕರ್ನಾಟಕಕ್ಕೆ ಜಯ

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ.

ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ ಕೊನೆಯ ದಿನವಾದ ಶುಕ್ರವಾರ ಎರಡನೇ ಇನಿಂಗ್ಸ್‌ನಲ್ಲಿ 77.5 ಓವರ್‌ಗಳಲ್ಲಿ 177 ರನ್ ಗಳಿಸಿ ಆಲೌಟ್‌ ಆಯಿತು.  ಮೊದಲ ಇನಿಂಗ್ಸ್‌ನಲ್ಲಿ 55 ರನ್‌ಗಳ ಅಲ್ಪಮುನ್ನಡೆ ಸಾಧಿಸಿದ್ದ ಕರ್ನಾಟಕ ತಂಡವು ಮೂರು ವಿಕೆಟ್‌ ಕಳೆದುಕೊಂಡು 128 ರನ್‌ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಎರಡನೇ ಇನ್ನಿಂಗ್ಸ್‌ ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಆರ್.‌ ರವಿಕುಮಾರ್‌  ೨೪ ರನ್‌ ಗಳಿಸಿ ರನ್‌ ಔಟ್‌ ಬಲೆಗೆ ಬಿದ್ದರು. ಕಳೆದ ಪಂದ್ಯದ ಶತಕವೀರ ಮಾಯಾಂಕ್‌ ಅಗರವಾಲ್‌ 14 ರನ್‌  ಗಳಿಸಿ ಔಟಾದರು. ಆದರೆ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ನಿಕಿನ್‌ ಜೋಶ್‌  ಬಿರುಸಿನ ಅಜೇಯ 44   ರನ್‌ ಗಳಿಸಿ ಗೆಲುವನ್ನು ಖಾತರಿ ಪಡಿಸಿದರು.  ಮನೀಶ್‌ ಪಾಂಡೆ  24 ಬಾಲ್‌ ಗಳಿಗೆ  27 ರನ್‌ ಗಳಿಸಿ ಕ್ಯಾಚಿತ್ತು ಆಟವಾಡಿದರು. ಕೃಷ್ಣಪ್ಪ ಗೌತಮ್‌ ಎರಡು ರನ್‌ ಬಾರಿಸಿ ಗೆಲುವಿನ ಪಾಲದಾರರಾದರು.

ಶುಕ್ರವಾರ ಬೆಳಗ್ಗಿನ ಅವಧಿಯಲ್ಲಿ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.

ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್‌ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.

ಕರ್ನಾಟಕದ ಆಫ್‌ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

3 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

4 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

18 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

19 hours ago