ಕ್ರೀಡೆ

ರಣಜಿ: ಛತ್ತೀಸಗಢದ ವಿರುದ್ಧ ಕರ್ನಾಟಕಕ್ಕೆ ಜಯ

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ.

ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ ಕೊನೆಯ ದಿನವಾದ ಶುಕ್ರವಾರ ಎರಡನೇ ಇನಿಂಗ್ಸ್‌ನಲ್ಲಿ 77.5 ಓವರ್‌ಗಳಲ್ಲಿ 177 ರನ್ ಗಳಿಸಿ ಆಲೌಟ್‌ ಆಯಿತು.  ಮೊದಲ ಇನಿಂಗ್ಸ್‌ನಲ್ಲಿ 55 ರನ್‌ಗಳ ಅಲ್ಪಮುನ್ನಡೆ ಸಾಧಿಸಿದ್ದ ಕರ್ನಾಟಕ ತಂಡವು ಮೂರು ವಿಕೆಟ್‌ ಕಳೆದುಕೊಂಡು 128 ರನ್‌ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಎರಡನೇ ಇನ್ನಿಂಗ್ಸ್‌ ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಆರ್.‌ ರವಿಕುಮಾರ್‌  ೨೪ ರನ್‌ ಗಳಿಸಿ ರನ್‌ ಔಟ್‌ ಬಲೆಗೆ ಬಿದ್ದರು. ಕಳೆದ ಪಂದ್ಯದ ಶತಕವೀರ ಮಾಯಾಂಕ್‌ ಅಗರವಾಲ್‌ 14 ರನ್‌  ಗಳಿಸಿ ಔಟಾದರು. ಆದರೆ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ನಿಕಿನ್‌ ಜೋಶ್‌  ಬಿರುಸಿನ ಅಜೇಯ 44   ರನ್‌ ಗಳಿಸಿ ಗೆಲುವನ್ನು ಖಾತರಿ ಪಡಿಸಿದರು.  ಮನೀಶ್‌ ಪಾಂಡೆ  24 ಬಾಲ್‌ ಗಳಿಗೆ  27 ರನ್‌ ಗಳಿಸಿ ಕ್ಯಾಚಿತ್ತು ಆಟವಾಡಿದರು. ಕೃಷ್ಣಪ್ಪ ಗೌತಮ್‌ ಎರಡು ರನ್‌ ಬಾರಿಸಿ ಗೆಲುವಿನ ಪಾಲದಾರರಾದರು.

ಶುಕ್ರವಾರ ಬೆಳಗ್ಗಿನ ಅವಧಿಯಲ್ಲಿ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.

ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್‌ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.

ಕರ್ನಾಟಕದ ಆಫ್‌ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.

lokesh

Recent Posts

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

9 mins ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

16 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

34 mins ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

58 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

1 hour ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

2 hours ago