ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್ ಸಿʼ ಯ ಟಾಪ್ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್ದತ್ ಪಡಿಕ್ಕಲ್ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ 90 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 288 ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆಯಿತು. ಮಯಾಂಕ್ ಅಗರ್ವಾಲ್ ಕೇವಲ (20) ರನ್ ಗಳಿಸಿ ನಿರ್ಗಮಿಸಿದರು. ನಂತರ ಬಂದ ಎಡಗೈ ದಾಂಡಿಗ ದೇವ್ದತ್ ಪಡಿಕ್ಕಲ್ ಆರ್. ಸಮರ್ಥ್ ಜೊತೆಗೂಡಿ ಇನ್ನಿಂಗ್ಸ್ ಕಟ್ಟಲು ಮುಂದಾದರು. ಆರ್. ಸಮರ್ಥ್ (57) ರನ್ ಬಾರಿಸಿದರು. ಇತ್ತ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದ ಪಡಿಕ್ಕಲ್ 216 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್ ಸಹಿತ 151 ರನ್ ಗಳಿಸಿ ಆಟವನ್ನು ಕಾಯ್ದಿರಿಸಿದ್ದಾರೆ. ಇವರಿಗೆ ಜೊತೆಯಾಗಿ ಹಾರ್ದಿಕ್ ರಾಜ್ (35) ರನ್ ಬಾರಿಸಿ ಸ್ಕ್ರೀಜ್ ನಲ್ಲಿದ್ದಾರೆ.
ಇತ್ತ ತಮಿಳುನಾಡು ತಂಡದ ನಾಯಕ ಸಾಯ್ ಕಿಶೋರ್ 94/3 ಮತ್ತು ಅಜಿತ್ ರಾಮ್ 53/2 ವಿಕೆಟ್ ಪಡೆದಿದ್ದಾರೆ.
ರಣಜಿ ಟ್ರೋಫಿ 2024 ರ ʼಗ್ರೂಪ್ ಸಿʼ ಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ತಲಾ 21 ಪಾಯಿಂಟ್ಗಳೊಂದಿಗೆ ಅಗ್ರ ಎರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡು ರನ್ ರೇಟ್ ನಿಂದಾಗಿ ಗ್ರೂಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಎರಡು ತಂಡಗಳು ತಲಾ ಐದು ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಗೆದ್ದು, ಒಂದು ಸೋಲು ಮತ್ತು ಒಂದು ಡ್ರಾ ನೊಂದಿಗೆ ಅಂತ್ಯಗೊಂಡಿದೆ.
ಈ ಪಂದ್ಯದಲ್ಲಿ ಗೆದ್ದ ತಂಡ ʼಸಿʼ ಗ್ರೂಪ್ನಲ್ಲಿ ಅಗ್ರಸ್ಥಾನಕ್ಕೇರಲಿದೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…