ಕ್ರೀಡೆ

Ranji trophy-2024: ಪಡಿಕ್ಕಲ್‌ ಶತಕದಾಟ; ಮೊದಲ ದಿನದಾಟದಂತ್ಯಕ್ಕೆ ಕರ್ನಾಟಕ 288/5

ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯ ಟಾಪ್‌ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್‌ದತ್‌ ಪಡಿಕ್ಕಲ್‌ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ 90 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 288 ಗಳಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆಯಿತು. ಮಯಾಂಕ್‌ ಅಗರ್ವಾಲ್‌ ಕೇವಲ (20) ರನ್‌ ಗಳಿಸಿ ನಿರ್ಗಮಿಸಿದರು. ನಂತರ ಬಂದ ಎಡಗೈ ದಾಂಡಿಗ ದೇವ್‌ದತ್‌ ಪಡಿಕ್ಕಲ್‌ ಆರ್‌. ಸಮರ್ಥ್‌ ಜೊತೆಗೂಡಿ ಇನ್ನಿಂಗ್ಸ್‌ ಕಟ್ಟಲು ಮುಂದಾದರು. ಆರ್‌. ಸಮರ್ಥ್‌ (57) ರನ್‌ ಬಾರಿಸಿದರು. ಇತ್ತ ಏಕಾಂಗಿಯಾಗಿ ಇನ್ನಿಂಗ್ಸ್‌ ಕಟ್ಟಿದ ಪಡಿಕ್ಕಲ್‌ 216 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 151 ರನ್‌ ಗಳಿಸಿ ಆಟವನ್ನು ಕಾಯ್ದಿರಿಸಿದ್ದಾರೆ. ಇವರಿಗೆ ಜೊತೆಯಾಗಿ ಹಾರ್ದಿಕ್‌ ರಾಜ್‌ (35) ರನ್‌ ಬಾರಿಸಿ ಸ್ಕ್ರೀಜ್‌ ನಲ್ಲಿದ್ದಾರೆ.

ಇತ್ತ ತಮಿಳುನಾಡು ತಂಡದ ನಾಯಕ ಸಾಯ್‌ ಕಿಶೋರ್‌ 94/3 ಮತ್ತು ಅಜಿತ್‌ ರಾಮ್‌ 53/2 ವಿಕೆಟ್‌ ಪಡೆದಿದ್ದಾರೆ.

ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ತಲಾ 21 ಪಾಯಿಂಟ್‌ಗಳೊಂದಿಗೆ ಅಗ್ರ ಎರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡು ರನ್‌ ರೇಟ್‌ ನಿಂದಾಗಿ ಗ್ರೂಪ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಎರಡು ತಂಡಗಳು ತಲಾ ಐದು ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಗೆದ್ದು, ಒಂದು ಸೋಲು ಮತ್ತು ಒಂದು ಡ್ರಾ ನೊಂದಿಗೆ ಅಂತ್ಯಗೊಂಡಿದೆ.

ಈ ಪಂದ್ಯದಲ್ಲಿ ಗೆದ್ದ ತಂಡ ʼಸಿʼ ಗ್ರೂಪ್‌ನಲ್ಲಿ ಅಗ್ರಸ್ಥಾನಕ್ಕೇರಲಿದೆ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

8 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

8 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

8 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

8 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

8 hours ago