ಕ್ರೀಡೆ

Ranji trophy-2024: ಪಡಿಕ್ಕಲ್‌ ಶತಕದಾಟ; ಮೊದಲ ದಿನದಾಟದಂತ್ಯಕ್ಕೆ ಕರ್ನಾಟಕ 288/5

ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯ ಟಾಪ್‌ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್‌ದತ್‌ ಪಡಿಕ್ಕಲ್‌ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ 90 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 288 ಗಳಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆಯಿತು. ಮಯಾಂಕ್‌ ಅಗರ್ವಾಲ್‌ ಕೇವಲ (20) ರನ್‌ ಗಳಿಸಿ ನಿರ್ಗಮಿಸಿದರು. ನಂತರ ಬಂದ ಎಡಗೈ ದಾಂಡಿಗ ದೇವ್‌ದತ್‌ ಪಡಿಕ್ಕಲ್‌ ಆರ್‌. ಸಮರ್ಥ್‌ ಜೊತೆಗೂಡಿ ಇನ್ನಿಂಗ್ಸ್‌ ಕಟ್ಟಲು ಮುಂದಾದರು. ಆರ್‌. ಸಮರ್ಥ್‌ (57) ರನ್‌ ಬಾರಿಸಿದರು. ಇತ್ತ ಏಕಾಂಗಿಯಾಗಿ ಇನ್ನಿಂಗ್ಸ್‌ ಕಟ್ಟಿದ ಪಡಿಕ್ಕಲ್‌ 216 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 151 ರನ್‌ ಗಳಿಸಿ ಆಟವನ್ನು ಕಾಯ್ದಿರಿಸಿದ್ದಾರೆ. ಇವರಿಗೆ ಜೊತೆಯಾಗಿ ಹಾರ್ದಿಕ್‌ ರಾಜ್‌ (35) ರನ್‌ ಬಾರಿಸಿ ಸ್ಕ್ರೀಜ್‌ ನಲ್ಲಿದ್ದಾರೆ.

ಇತ್ತ ತಮಿಳುನಾಡು ತಂಡದ ನಾಯಕ ಸಾಯ್‌ ಕಿಶೋರ್‌ 94/3 ಮತ್ತು ಅಜಿತ್‌ ರಾಮ್‌ 53/2 ವಿಕೆಟ್‌ ಪಡೆದಿದ್ದಾರೆ.

ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ತಲಾ 21 ಪಾಯಿಂಟ್‌ಗಳೊಂದಿಗೆ ಅಗ್ರ ಎರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡು ರನ್‌ ರೇಟ್‌ ನಿಂದಾಗಿ ಗ್ರೂಪ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಎರಡು ತಂಡಗಳು ತಲಾ ಐದು ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಗೆದ್ದು, ಒಂದು ಸೋಲು ಮತ್ತು ಒಂದು ಡ್ರಾ ನೊಂದಿಗೆ ಅಂತ್ಯಗೊಂಡಿದೆ.

ಈ ಪಂದ್ಯದಲ್ಲಿ ಗೆದ್ದ ತಂಡ ʼಸಿʼ ಗ್ರೂಪ್‌ನಲ್ಲಿ ಅಗ್ರಸ್ಥಾನಕ್ಕೇರಲಿದೆ.

andolanait

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

1 hour ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

1 hour ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

1 hour ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

1 hour ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

2 hours ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

15 hours ago