ಕ್ರೀಡೆ

Ranji trophy-2024: ಪಡಿಕ್ಕಲ್‌ ಶತಕದಾಟ; ಮೊದಲ ದಿನದಾಟದಂತ್ಯಕ್ಕೆ ಕರ್ನಾಟಕ 288/5

ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯ ಟಾಪ್‌ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್‌ದತ್‌ ಪಡಿಕ್ಕಲ್‌ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ 90 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 288 ಗಳಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆಯಿತು. ಮಯಾಂಕ್‌ ಅಗರ್ವಾಲ್‌ ಕೇವಲ (20) ರನ್‌ ಗಳಿಸಿ ನಿರ್ಗಮಿಸಿದರು. ನಂತರ ಬಂದ ಎಡಗೈ ದಾಂಡಿಗ ದೇವ್‌ದತ್‌ ಪಡಿಕ್ಕಲ್‌ ಆರ್‌. ಸಮರ್ಥ್‌ ಜೊತೆಗೂಡಿ ಇನ್ನಿಂಗ್ಸ್‌ ಕಟ್ಟಲು ಮುಂದಾದರು. ಆರ್‌. ಸಮರ್ಥ್‌ (57) ರನ್‌ ಬಾರಿಸಿದರು. ಇತ್ತ ಏಕಾಂಗಿಯಾಗಿ ಇನ್ನಿಂಗ್ಸ್‌ ಕಟ್ಟಿದ ಪಡಿಕ್ಕಲ್‌ 216 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 151 ರನ್‌ ಗಳಿಸಿ ಆಟವನ್ನು ಕಾಯ್ದಿರಿಸಿದ್ದಾರೆ. ಇವರಿಗೆ ಜೊತೆಯಾಗಿ ಹಾರ್ದಿಕ್‌ ರಾಜ್‌ (35) ರನ್‌ ಬಾರಿಸಿ ಸ್ಕ್ರೀಜ್‌ ನಲ್ಲಿದ್ದಾರೆ.

ಇತ್ತ ತಮಿಳುನಾಡು ತಂಡದ ನಾಯಕ ಸಾಯ್‌ ಕಿಶೋರ್‌ 94/3 ಮತ್ತು ಅಜಿತ್‌ ರಾಮ್‌ 53/2 ವಿಕೆಟ್‌ ಪಡೆದಿದ್ದಾರೆ.

ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ತಲಾ 21 ಪಾಯಿಂಟ್‌ಗಳೊಂದಿಗೆ ಅಗ್ರ ಎರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡು ರನ್‌ ರೇಟ್‌ ನಿಂದಾಗಿ ಗ್ರೂಪ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಎರಡು ತಂಡಗಳು ತಲಾ ಐದು ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಗೆದ್ದು, ಒಂದು ಸೋಲು ಮತ್ತು ಒಂದು ಡ್ರಾ ನೊಂದಿಗೆ ಅಂತ್ಯಗೊಂಡಿದೆ.

ಈ ಪಂದ್ಯದಲ್ಲಿ ಗೆದ್ದ ತಂಡ ʼಸಿʼ ಗ್ರೂಪ್‌ನಲ್ಲಿ ಅಗ್ರಸ್ಥಾನಕ್ಕೇರಲಿದೆ.

andolanait

Recent Posts

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 seconds ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 mins ago