ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್ ಕೆ.ಎಲ್.ರಾಹುಲ್ ಕಣಕ್ಕಿಳಿದಿದ್ದಾರೆ.
ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.
ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್ ಹೊಂದಿದ್ದೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.
ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಶುಭಮನ್ ಗಿಲ್, ಶ್ರೇಯಸ್ ಐಯ್ಯರ್ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.
ಈಗ ವಿರಾಟ್ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್ ರಾಹುಲ್ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…