ಕ್ರೀಡೆ

ರಣಜಿ ಟ್ರೋಫಿ 2025: ಕರ್ನಾಟಕ ತಂಡದ ಪರ ಕಣಕ್ಕಿಳಿದ ಕೆ.ಎಲ್‌. ರಾಹುಲ್‌

ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್‌ ಕೆ.ಎಲ್‌.ರಾಹುಲ್‌ ಕಣಕ್ಕಿಳಿದಿದ್ದಾರೆ.

ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.

ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್‌ ಹೊಂದಿದ್ದೂ, ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.

ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್‌ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ರವೀಂದ್ರ ಜಡೇಜಾ, ಶುಭಮನ್‌ ಗಿಲ್‌, ಶ್ರೇಯಸ್‌ ಐಯ್ಯರ್‌ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.

ಈಗ ವಿರಾಟ್‌ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್‌ ರಾಹುಲ್‌ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

34 mins ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

4 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

4 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

4 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

14 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

14 hours ago