ಕ್ರೀಡೆ

ರಣಜಿ ಟ್ರೋಫಿ 2025: ಕರ್ನಾಟಕ ತಂಡದ ಪರ ಕಣಕ್ಕಿಳಿದ ಕೆ.ಎಲ್‌. ರಾಹುಲ್‌

ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್‌ ಕೆ.ಎಲ್‌.ರಾಹುಲ್‌ ಕಣಕ್ಕಿಳಿದಿದ್ದಾರೆ.

ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.

ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್‌ ಹೊಂದಿದ್ದೂ, ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.

ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್‌ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ರವೀಂದ್ರ ಜಡೇಜಾ, ಶುಭಮನ್‌ ಗಿಲ್‌, ಶ್ರೇಯಸ್‌ ಐಯ್ಯರ್‌ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.

ಈಗ ವಿರಾಟ್‌ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್‌ ರಾಹುಲ್‌ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago