ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್ ಕೆ.ಎಲ್.ರಾಹುಲ್ ಕಣಕ್ಕಿಳಿದಿದ್ದಾರೆ.
ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.
ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್ ಹೊಂದಿದ್ದೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.
ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಶುಭಮನ್ ಗಿಲ್, ಶ್ರೇಯಸ್ ಐಯ್ಯರ್ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.
ಈಗ ವಿರಾಟ್ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್ ರಾಹುಲ್ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…