ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್ ಕೆ.ಎಲ್.ರಾಹುಲ್ ಕಣಕ್ಕಿಳಿದಿದ್ದಾರೆ.
ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಮುಖ್ಯವಾಗಿದೆ.
ʼಸಿʼ ಗುಂಪಿನಲ್ಲಿರುವ ಎರಡು ತಂಡಗಳು, ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲೂ ಸೋತಿಲ್ಲ. ಹರಿಯಾಣ ತಲಾ ಮೂರು ಜಯ ಹಾಗೂ ಡ್ರಾನೊಂದಿಗೆ 26 ಪಾಯಿಂಟ್ ಹೊಂದಿದ್ದೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಆದರೆ, ಕರ್ನಾಟಕ ತಂಡ 19 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಕರ್ನಾಟಕ ಮುಂದಿನ ಸುತ್ತು ಪ್ರವೇಶಿಸಬೇಕೆಂದರೆ ಹರಿಯಾಣ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಇಲ್ಲಿ ಗೆದ್ದರೂ, ಕೇರಳ-ಬಿಹಾರ ಪಂದ್ಯದ ಫಲಿತಾಂಶವೂ ಮುಖ್ಯವಾಗಲಿದೆ.
ಪ್ರಮುಖ ಟೂರ್ನಿಗಳ ವೈಫಲ್ಯದ ನಂತರ ದೇಶಿ ಕ್ರಿಕೆಟ್ನಲ್ಲಿ ಭಾರತ ತಂಡದ ಆಟಗಾರರು ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ನಿಯಮಗಳನ್ನು ಜಾರಿ ಮಾಡಿತ್ತು. ಇದರನ್ವಯ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಶುಭಮನ್ ಗಿಲ್, ಶ್ರೇಯಸ್ ಐಯ್ಯರ್ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಡಿದ್ದರು.
ಈಗ ವಿರಾಟ್ ಕೊಹ್ಲಿ ದೆಹಲಿ ತಂಡದ ಪರವಾಗಿ ಹಾಗೂ ಕೆ.ಎಲ್ ರಾಹುಲ್ ಕರ್ನಾಟಕ ತಂಡದ ಪರ ಕಣಕ್ಕಿಳಿದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…